Tuesday, June 17, 2025
Google search engine

Homeರಾಜ್ಯಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ: ಪೊಲೀಸ್ ತನಿಖೆ ಆರಂಭ

ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ: ಪೊಲೀಸ್ ತನಿಖೆ ಆರಂಭ

ಬೆಂಗಳೂರು: ಬೆಂಗಳೂರು ನಗರದ ಕುಂಬಳಗೋಡು, ಕಲಾಸಿಪಾಳ್ಯ ಮತ್ತು ರಾಜರಾಜೇಶ್ವರಿ ನಗರದಲ್ಲಿರುವ ಕೆಲ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ನಗರದಲ್ಲಿ ಭೀತಿಯ ವಾತಾವರಣ ಮೂಡಿಸಿದೆ. ಇ-ಮೇಲ್ ಮೂಲಕ ಬಂದ ಈ ಬೆದರಿಕೆಯಲ್ಲಿ, ಹೈದರಾಬಾದ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ನ್ಯಾಯ ನೀಡದಿದ್ದರೆ ಬಾಂಬ್ ಸ್ಫೋಟ ಮಾಡುವೆವು ಎಂದು ಉಲ್ಲೇಖಿಸಲಾಗಿದೆ.

ಈ ಸಂಬಂಧ ಯಾವುದೇ ಪ್ರಕರಣ ಹಾಗೂ ಕರ್ನಾಟಕದ ಸಂಪರ್ಕವಿದೆಯೇ ಎಂಬುದರ ಬಗ್ಗೆ ಇದೀಗ ಜನರಲ್ಲಿ ಪ್ರಶ್ನೆಗಳು ಎದ್ದಿವೆ. ವಿದ್ಯಾಸೌಧ ಪಬ್ಲಿಕ್ ಶಾಲೆ ಮತ್ತು ಕಿಡ್ಸ್ ಶಾಲೆಗೆ ಭಾನುವಾರ ರಾತ್ರಿ ಇ-ಮೇಲ್ ಮೂಲಕ ಬೆದರಿಕೆ ಬಂದಿತ್ತು. ಮಧ್ಯಾಹ್ನ 1 ಗಂಟೆಗೆ ಬಾಂಬ್ ಸ್ಫೋಟ ಮಾಡಿ ಕಟ್ಟಡ ನಾಶ ಮಾಡಲಾಗುತ್ತದೆ ಎಂಬ ಶಂಕಾಸ್ಪದ ಸಂದೇಶದ ಹಿನ್ನೆಲೆಯಲ್ಲಿ ಶಾಲೆಯ ಆಡಳಿತ ಮಂಡಳಿಯವರು ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದರು.

ಪೊಲೀಸರು ಶ್ವಾನ ದಳದೊಂದಿಗೆ ಶಾಲೆಗಳಿಗೆ ಭೇಟಿ ನೀಡಿ ಸಂಪೂರ್ಣ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ಇಂತಹ ಹುಸಿ ಬೆದರಿಕೆ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿವೆ. ಇದು ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ವರದಿಯಾಗಿರುವ ನಾಲ್ಕನೇ ಘಟನೆ. ವೈಟ್ಫೀಲ್ಡ್, ಆಚಾರ್ಯ ಕಾಲೇಜು ಮತ್ತು ಇಂಡಿಗೋ ವಿಮಾನಕ್ಕೂ ಇದೇ ರೀತಿಯ ಬೆದರಿಕೆ ಸಂದೇಶ ಬಂದಿತ್ತು.

RELATED ARTICLES
- Advertisment -
Google search engine

Most Popular