Wednesday, June 18, 2025
Google search engine

Homeರಾಜಕೀಯಕಾಲ್ತುಳಿತ ಪ್ರಕರಣ: ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಕಾಲ್ತುಳಿತ ಪ್ರಕರಣ: ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ರಾಜೀನಾಮೆಗಾಗಿ ಬಿಜೆಪಿ ನಾಯಕರು ನಡೆಸಿದ ಪ್ರತಿಭಟನೆ ಇದೀಗ ತೀವ್ರ ರೂಪ ಪಡೆದುಕೊಂಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಸಂಸದ ಗೋವಿಂದ ಕಾರಜೋಳ, ಶಾಸಕರಾದ ಕೆ. ಗೋಪಾಲಯ್ಯ, ಸಿಮೆಂಟ್ ಮಂಜುನಾಥ್, ಭೈರತಿ ಬಸವರಾಜು, ಸಿ.ಕೆ. ರಾಮಮೂರ್ತಿ ಮತ್ತು ಎಂಎಲ್‌ಸಿ ಭಾರತಿ ಶೆಟ್ಟಿ, ರವಿಕುಮಾರ್ ಸೇರಿದಂತೆ ಹಲವಾರು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಿಗ್ಗೆ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಯಿತು. ನಂತರ ಸಿಎಂ ಸಿದ್ದರಾಮಯ್ಯ ಅವರ ನಿವಾಸದತ್ತ ಮುತ್ತಿಗೆ ಯತ್ನ ನಡೆದಿದ್ದು, ಪೊಲೀಸರು ತಕ್ಷಣ ದಾಳಿಕೋರರನ್ನು ತಡೆದಿದ್ದಾರೆ. ನಂತರ ವಶಕ್ಕೆ ಪಡೆದ ನಾಯಕರನ್ನು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ಬಿಜೆಪಿ ಮುಖಂಡರು ಸರ್ಕಾರದ ವಿರುದ್ಧ ಗಂಭೀರ ಆರೋಪ ಹೊರಿಸಿದ್ದು, “ಕಾಲ್ತುಳಿತ ಪ್ರಕರಣದಲ್ಲಿ ಸರಕಾರದ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ” ಎಂದು ತಿಳಿಸಿದ್ದಾರೆ. ಸಿಎಂ ಮತ್ತು ಡಿಸಿಎಂ ಅವರ ರಾಜೀನಾಮೆ ನೀಡಲೇ ಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular