Wednesday, June 18, 2025
Google search engine

Homeರಾಜ್ಯಜೂನ್ 19ರಂದು ಅಮಿತ್ ಶಾ ಕರ್ನಾಟಕಕ್ಕೆ ಭೇಟಿ

ಜೂನ್ 19ರಂದು ಅಮಿತ್ ಶಾ ಕರ್ನಾಟಕಕ್ಕೆ ಭೇಟಿ

ಬೆಂಗಳೂರು: ಗುರುವಾರ ರಾತ್ರಿ ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ಜೂನ್​ 20ರಂದು ಬಿಜಿಎಸ್​ ಮೆಡಿಕಲ್​​ ಕಾಲೇಜು ಕ್ಯಾಂಪಸ್​​ನಲ್ಲಿ ನಡೆಯಲಿರುವ ಉದ್ಘಾಟನಾ  ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಕಾರ್ಯಕ್ರಮ ಮುಗಿಸಿ ಶುಕ್ರುವಾರ ಮಧ್ಯಾಹ್ನ ದೆಹಲಿಗೆ ವಾಪಸ್​ ಆಗಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ​​

ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಮಂಗಳವಾರ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಈ ಭೇಟಿಯಲ್ಲಿ ದೆಹಲಿಯ ಅಭಿವೃದ್ಧಿ, ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳ ಕುರಿತು ದೀರ್ಘ ಚರ್ಚೆ ನಡೆಯಿತು. ರೇಖಾ ಗುಪ್ತಾ ಅವರು ಈ ಭೇಟಿಯನ್ನು “ಸೌಹಾರ್ದಯುತ, ರಚನಾತ್ಮಕ ಹಾಗೂ ಅತ್ಯಂತ ಫಲಪ್ರದ” ಎಂದು ವಿವರಿಸಿದ್ದಾರೆ.

ಬೆಳವಣಿಗೆ ಬಗ್ಗೆ ತಮ್ಮ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆಯಲ್ಲಿ ಪ್ರಕಟಿಸಿರುವ ಸಂದೇಶದಲ್ಲಿ ಅವರು ಹೀಗೆ ಹೇಳಿದ್ದಾರೆ:
“ಇಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಜೀ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾರ್ಗದರ್ಶನ ಪಡೆದೆ. ದೆಹಲಿಯ ಅಭಿವೃದ್ಧಿ ಹಾಗೂ ಸಾರ್ವಜನಿಕ ಸೇವೆಗಳ ಕುರಿತು ಚರ್ಚೆಯು ಅತ್ಯಂತ ಚಿಂತನಶೀಲ ಮತ್ತು ಪ್ರಾಮಾಣಿಕವಾಗಿತ್ತು. ಅವರ ನಿಸ್ವಾರ್ಥ ಸೇವೆ ಹಾಗೂ ಸಂಘಟನೆಗೆ ನೀಡುವ ಆದ್ಯತೆ ಎಲ್ಲ ಪ್ರತಿನಿಧಿಗಳಿಗೆ ಸ್ಫೂರ್ತಿಯಾಗಿದೆ.”

RELATED ARTICLES
- Advertisment -
Google search engine

Most Popular