Thursday, June 19, 2025
Google search engine

Homeಅಪರಾಧಐಶ್ವರ್ಯ ಗೌಡ ವಂಚನೆ ಪ್ರಕರಣ ಸಿಐಡಿಗೆ ವರ್ಗಾವಣೆ

ಐಶ್ವರ್ಯ ಗೌಡ ವಂಚನೆ ಪ್ರಕರಣ ಸಿಐಡಿಗೆ ವರ್ಗಾವಣೆ

ಬೆಂಗಳೂರು: ಐಶ್ವರ್ಯ ಗೌಡ ವಿರುದ್ಧದ ವಂಚನೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ (CID) ವರ್ಗಾಯಿಸಿ ಆದೇಶ ಹೊರಡಿಸಿದೆ. ಐಶ್ವರ್ಯ ವಿರುದ್ಧ ರಾಜರಾಜೇಶ್ವರಿ ನಗರ, ಚಂದ್ರಾಲೇಔಟ್, ಮಂಡ್ಯ ಸೇರಿದಂತೆ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ಸಿಡಿಆರ್ ಸಂಬಂಧಿತ ದೂರು ಹೊರತುಪಡಿಸಿ ಉಳಿದ ಎಲ್ಲಾ ಪ್ರಕರಣಗಳ ತನಿಖೆಯನ್ನು ಸಿಐಡಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.

ಸಿಐಡಿಯ ಆರ್ಥಿಕ ಅಪರಾಧ ವಿಭಾಗ ಇದೀಗ ಪ್ರಕರಣವನ್ನು ಕೈಗೆತ್ತಿಕೊಂಡಿದೆ. ಈ ಮೊದಲು ಬ್ಯಾಟರಾಯನಪುರ ಉಪವಿಭಾಗದ ಪೊಲೀಸರು ತನಿಖೆ ನಡೆಸುತ್ತಿದ್ದರು. ಇತ್ತ, ಇಡಿ (ED) ಕೂಡ ವಂಚನೆ ಸಂಬಂಧ ತನಿಖೆ ನಡೆಸುತ್ತಿದ್ದು, ಐಶ್ವರ್ಯ ಗೌಡನನ್ನು ಬಂಧಿಸಿ ಜೈಲಿಗೆ ಕಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಮಾಜಿ ಸಂಸದ ಡಿ.ಕೆ. ಸುರೇಶ್‌ಗೆ ನೋಟಿಸ್ ಜಾರಿ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular