ಬೆಂಗಳೂರು: ಕರ್ನಾಟಕ ರಾಜಕೀಯದ ಪ್ರಮುಖ ಮುಖಂಡರಲ್ಲಿ ಒಬ್ಬರಾದ ಮಾಜಿ ಸಂಸದ ಡಿ.ಕೆ. ಸುರೇಶ್, ಇಂದು ಬೆಳಗ್ಗೆ 10.30ಕ್ಕೆ ಬೆಂಗಳೂರು ಹಾಲು ಉತ್ಪಾದಕರ ಸಹಕಾರ ಸಂಘ (ಬಮೂಲ್) ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂಲಕ ಅವರು ಸಹಕಾರಿ ಕ್ಷೇತ್ರದತ್ತ ತನ್ನ ಬಲದ ಹೆಜ್ಜೆಯನ್ನು ಇಟ್ಟಿದ್ದಾರೆ.
ಬೆಂಗಳೂರು ಡೇರಿ ವೃತ್ತದಲ್ಲಿರುವ ಬಮೂಲ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ನಡೆದಿದೆ. ಬಮೂಲ್ ಸಹಕಾರ ಸಂಘದಲ್ಲಿ ಒಟ್ಟು 14 ನಿರ್ದೇಶಕರಿದ್ದು, ಈ ನಿರ್ದೇಶಕರ ಪೈಕಿ ಬಹುತೇಕರು ಡಿ.ಕೆ. ಸುರೇಶ್ ಅವರ ಬೆಂಬಲದಲ್ಲಿದ್ದಾರೆ ಎಂದು ಮೂಲಗಳು ತಿಳಿಸುತ್ತಿವೆ. ಈಗಾಗಲೇ ಅವರು ಬಮೂಲ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಅಧ್ಯಕ್ಷ ಸ್ಥಾನಕ್ಕೆ ಅವರ ಆಯ್ಕೆ ಬಹುತೇಕ ಖಚಿತವಾಗಿದೆ.