Wednesday, June 25, 2025
Google search engine

Homeಅಪರಾಧಕಾನೂನುರಾಜ್ಯದ ಹಲವು ಕಡೆಗಳಲ್ಲಿ 8 ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಛೇರಿ ಮೇಲೆ ಲೋಕಾಯುಕ್ತ ದಾಳಿ

ರಾಜ್ಯದ ಹಲವು ಕಡೆಗಳಲ್ಲಿ 8 ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಛೇರಿ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಭ್ರಷ್ಟಾಚಾರ ವಿರುದ್ಧದ ಹೋರಾಟದ ಭಾಗವಾಗಿ, ಕರ್ನಾಟಕ ಲೋಕಾಯುಕ್ತ ಇಲಾಖೆ ಇಂದು ಮುಂಜಾನೆ ಬೃಹತ್ ದಾಳಿ ನಡೆಸಿದೆ. ಬೆಂಗಳೂರನ್ನು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿನ 8 ಮಂದಿ ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ.

ಬೆಳಗಿನ ಜಾವದಿಂದಲೇ ಆರಂಭವಾದ ಈ ಕಾರ್ಯಾಚರಣೆಯಲ್ಲಿ, ಅಧಿಕಾರಿಗಳ ಆಸ್ತಿಪಾಸ್ತಿಗಳ ದಾಖಲೆಗಳು, ಲೆಕ್ಕಪತ್ರಗಳು ಹಾಗೂ ಹಣಕಾಸು ವ್ಯವಹಾರಗಳ ದಾಖಲಾತಿಗಳನ್ನು ಪರಿಶೀಲಿಸಲಾಗುತ್ತಿದೆ.

ಬೆಂಗಳೂರಿನ ಗೋವಿಂದರಾಜನಗರದಲ್ಲಿರುವ ಬಿಬಿಎಂಪಿ ಸಹಾಯಕ ಇಂಜಿನಿಯರ್ ಪ್ರಕಾಶ್, ಶಿವಮೊಗ್ಗದ ಸಾವಯುವ ಕೃಷಿ ಸಹ ಸಂಶೋಧನಾ ನಿರ್ದೇಶಕ ಡಾ.ಎಸ್.ಪ್ರದೀಪ್, ಕಲಬುರಗಿಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರಿಂಗ್ ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ, ಸಣ್ಣೂರು ಗ್ರಾಮದ ಪಿಡಿಒ ರಾಮಚಂದ್ರ, ಚಿಕ್ಕಮಗಳೂರು ನಗರಸಭೆಯ ಲೆಕ್ಕಾಧಿಕಾರಿ ಲತಾಮಣಿ, ಆನೇಕಲ್ ಪುರಸಭೆಯ ಮುಖ್ಯಾಧಿಕಾರಿ ಕೆ.ಜಿ. ಅಮರನಾಥ್, ಗದಗದ ನಗರ ಪೊಲೀಸ್ ನಿರೀಕ್ಷಕ ಧ್ರುವರಾಜ್, ಧಾರವಾಡದ ಮಲಪ್ರಭಾ ಪ್ರಾಜೆಕ್ಟ್ ಇಂಜಿನಿಯರ್ ಅಶೋಕ್ ವಲ್ಸಂದ್ ಎಂಬವರ ಮನೆ, ಕಚೇರಿಗಳಿಗೆ ಲೋಕಾಯುಕ್ತ ದಾಳಿ ನಡೆದಿದೆ.


RELATED ARTICLES
- Advertisment -
Google search engine

Most Popular