Wednesday, June 25, 2025
Google search engine

Homeಸ್ಥಳೀಯಕಾವೇರಿ ನದಿ ಪ್ರವಾಹ ಭೀತಿ: ಬಲಮುರಿ, ಎಡಮುರಿ ಸೇರಿದಂತೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ಕಾವೇರಿ ನದಿ ಪ್ರವಾಹ ಭೀತಿ: ಬಲಮುರಿ, ಎಡಮುರಿ ಸೇರಿದಂತೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ಮಂಡ್ಯ: ರಾಜ್ಯದ ವಿವಿಧೆಡೆ ನಿರಂತರ ಮಳೆಯ ಪರಿಣಾಮವಾಗಿ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿದ್ದು, ಕೆಆರ್‌ಎಸ್ ಅಣೆಕಟ್ಟೆಯ ಕೆಳಭಾಗದ ಪ್ರದೇಶಗಳಲ್ಲಿ ಪ್ರವಾಹದ ಭೀತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನದಿ ಪಾತ್ರದಲ್ಲಿರುವ ಹಲವು ಪ್ರಮುಖ ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದು, ಜನತೆಗೆ ಎಚ್ಚರಿಕೆ ನೀಡಲಾಗಿದೆ.

ಶ್ರೀರಂಗಪಟ್ಟಣ ತಹಶೀಲ್ದಾರ್‌ ಅವರು ಜಾರಿಗೊಳಿಸಿದ ಆದೇಶದಂತೆ, ಬಲಮುರಿ, ಎಡಮುರಿ, ಸ್ನಾನಘಟ್ಟ, ಸಂಗಮ, ನಿಮಿಷಾಂಭ ದೇಗುಲ ಮತ್ತು ಘೋಸಾಯ್ ಘಾಟ್ ಪ್ರದೇಶಗಳಿಗೆ ಪ್ರವಾಸಿಗರು ಪ್ರವೇಶಿಸಲು ಅವಕಾಶವಿಲ್ಲ. ನದಿ ಪಾತ್ರದಲ್ಲಿ ನಡೆಯುವ ಧಾರ್ಮಿಕ ಚಟುವಟಿಕೆಗಳೂ ಸೇರಿದಂತೆ ಪಿಂಡ ಪ್ರದಾನ ಪೂಜೆಗಳು ಕೂಡ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಕೆಆರ್‌ಎಸ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಡಲಾಗುತ್ತಿದ್ದು, ಪರಿಣಾಮವಾಗಿ ನದಿಯ ಹರಿವು ವೇಗವಾಗಿ ಸಾಗುತ್ತಿದೆ. ಇದು ನದಿಪಾತ್ರದ ಪ್ರದೇಶಗಳಲ್ಲಿ ನೀರು ಹರಿದುಬರುವ ಸಾಧ್ಯತೆಯನ್ನು ಹೆಚ್ಚಿಸಿದೆ. ಪ್ರವಾಹದ ಅಪಾಯದ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನದಿ ಪಾತ್ರದ ಪ್ರಮುಖ ಆಯಕಟ್ಟಿನ ಸ್ಥಳದಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.

RELATED ARTICLES
- Advertisment -
Google search engine

Most Popular