Friday, July 4, 2025
Google search engine

Homeಅಪರಾಧಕೊಟ್ಟ ಸಾಲ ತೀರಿಸುವಂತೆ ಕೇಳಿದ್ದಕ್ಕೆ ಪೆಟ್ರೋಲ್‌ ಸುರಿದು ಮನೆಗೆ ಬೆಂಕಿ ಹಚ್ಚಿದ ಭೂಪ!

ಕೊಟ್ಟ ಸಾಲ ತೀರಿಸುವಂತೆ ಕೇಳಿದ್ದಕ್ಕೆ ಪೆಟ್ರೋಲ್‌ ಸುರಿದು ಮನೆಗೆ ಬೆಂಕಿ ಹಚ್ಚಿದ ಭೂಪ!

ಬೆಂಗಳೂರು: ಕೊಟ್ಟ ಸಾಲ ತೀರಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬನು ಮನೆಗೆ ಬೆಂಕಿ ಹಚ್ಚಿದ ಘಟನೆ ವಿವೇಕ್ ನಗರದಲ್ಲಿ ಜುಲೈ 1ರಂದು ನಡೆದಿದೆ. ಬೆಂಕಿ ಹಚ್ಚಿದ ಆರೋಪಿಯನ್ನು ಸುಬ್ರಮಣಿ ಎಂದು ಗುರುತಿಸಲಾಗಿದೆ.

ಆರೋಪಿಯ ಸಹೋದರಿ ಪಾರ್ವತಿ, ತನ್ನ ಮಗಳ ಮದುವೆಗಾಗಿ ವೆಂಕಟರಮಣಿಯಿಂದ 5 ಲಕ್ಷ ರೂ. ಸಾಲ ಪಡೆದಿದ್ದರು. ವರ್ಷಗಳಾದರೂ ಹಣ ಮರಳಿಸದೆ ಇದ್ದಾಗ, ವೆಂಕಟರಮಣಿ ಹಣ ಕೇಳಿದ್ದಾರೆ. ಈ ವಿಚಾರಕ್ಕೆ ಕೋಪಗೊಂಡ ಪಾರ್ವತಿ ಹಾಗೂ ಆಕೆಯ ಮಗಳು ಗಲಾಟೆ ಮಾಡಿದ್ದು, ಬಳಿಕ ಸುಬ್ರಮಣಿ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದ್ದಾನೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಠಾಣೆಗೆ ದೂರು ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

RELATED ARTICLES
- Advertisment -
Google search engine

Most Popular