Saturday, July 5, 2025
Google search engine

Homeಆರೋಗ್ಯಹೃದಯಾಘಾತ ಪ್ರಕರಣಗಳ ಏರಿಕೆ: ಮೈಸೂರು ಜಯದೇವ ಆಸ್ಪತ್ರೆಗೆ ಹೆಚ್ಚುವರಿ ತಜ್ಞ ವೈದ್ಯರ ನೇಮಕಕ್ಕೆ ಸಿಎಂ ಸೂಚನೆ

ಹೃದಯಾಘಾತ ಪ್ರಕರಣಗಳ ಏರಿಕೆ: ಮೈಸೂರು ಜಯದೇವ ಆಸ್ಪತ್ರೆಗೆ ಹೆಚ್ಚುವರಿ ತಜ್ಞ ವೈದ್ಯರ ನೇಮಕಕ್ಕೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯದ ಮಲೆನಾಡು ಮತ್ತು ಅರೆ ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಗೆ ಹೆಚ್ಚುವರಿ ತಜ್ಞ ವೈದ್ಯರನ್ನು ನೇಮಕ ಮಾಡುವಂತೆ ಸೂಚನೆ ನೀಡಿದ್ದಾರೆ. ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳ ಶಾಸಕರು ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ವೈದ್ಯಕೀಯ ತಪಾಸಣೆಗಾಗಿ ಮೈಸೂರಿನ ಜಯದೇವ ಸಂಸ್ಥೆಗೆ ಹೆಚ್ಚುತ್ತಿರುವ ಜನಪ್ರವಾಹವನ್ನು ಹತ್ತಿಕ್ಕಲು ತಾತ್ಕಾಲಿಕವಾಗಿ ಇತರ ಜಿಲ್ಲೆಗಳಿಂದ ತಜ್ಞರನ್ನು ನಿಯೋಜನೆ ಮಾಡುವಂತೆ ಶಾಸಕ ದಿನೇಶ್ ಗೂಳಿಗೌಡ ಅವರು ಪತ್ರ ಬರೆದು ಆಗ್ರಹಿಸಿದ್ದರು. ಇದಕ್ಕೆ ಸಿಎಂ ತ್ವರಿತ ಸ್ಪಂದನೆ ನೀಡಿದ್ದು, ವೈದ್ಯಕೀಯ ಶಿಕ್ಷಣ ಇಲಾಖೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಶಾಸಕ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ, 30 ರಿಂದ 50 ವರ್ಷ ವಯಸ್ಸಿನವರಲ್ಲಿ ಹೃದಯಾಘಾತ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವುದು ಮತ್ತು ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ರೋಗಿಗಳ ಸಂಖ್ಯೆ ಸಾಮರ್ಥ್ಯಕ್ಕಿಂತ ದುಪ್ಪಟ್ಟಾಗಿರುವ (ದಿನಕ್ಕೆ 700ರ ಬದಲಿಗೆ 1500-2000) ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ ಮಾಡಬೇಕಿದೆ ಎಂದು ಆಗ್ರಹಿಸಿದರು.

ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರಾಥಮಿಕ ತಪಾಸಣೆ ವ್ಯವಸ್ಥೆ, ಹೃದಯಾಘಾತದ ಕಾರಣಗಳ ಕುರಿತು ಸಮಗ್ರ ಅಧ್ಯಯನ, ಜನಜಾಗೃತಿ ಮತ್ತು ಆರೋಗ್ಯ ಮೂಲಸೌಕರ್ಯ ಬಲಪಡಿಸುವಿಕೆ ಸೇರಿದಂತೆ ಹಲವು ಮಹತ್ವದ ಅಂಶಗಳನ್ನು ಪ್ರಸ್ತಾಪಿಸಿ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರಿಗೆ ಪತ್ರದಲ್ಲಿ ಒತ್ತಾಯಿಸಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಂದಿಸಿದ್ದಾರೆ.

RELATED ARTICLES
- Advertisment -
Google search engine

Most Popular