Monday, April 21, 2025
Google search engine

Homeಸ್ಥಳೀಯಎಳೆನೀರು ಮಾರುಕಟ್ಟೆಗೆ ಶಾಸಕ ಹೆಚ್.ಟಿ.ಮಂಜು ಭೇಟಿ

ಎಳೆನೀರು ಮಾರುಕಟ್ಟೆಗೆ ಶಾಸಕ ಹೆಚ್.ಟಿ.ಮಂಜು ಭೇಟಿ


ಕೆ.ಆರ್.ಪೇಟೆ: ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ಎಳೆನೀರು ಮಾರುಕಟ್ಟೆಗೆ ಶಾಸಕ ಹೆಚ್.ಟಿ.ಮಂಜು ಭೇಟಿ ನೀಡಿ ಎಳೆನೀರು ವ್ಯಾಪಾರಿಗಳೊಂದಿಗೆ ಚರ್ಚೆ ನಡೆಸಿದರು.
ನಮ್ಮ ತಾಲ್ಲೂಕಿನ ಎಳೆನೀರಿಗೆ ವಿವಿಧ ರಾಜ್ಯಗಳಲ್ಲಿ ಒಳ್ಳೆಯ ಬೇಡಿಕೆ ಇದೆ. ಇಲ್ಲಿನ ಬೆಳೆಗಾರರ ಹಿತಾಸಕ್ತಿಯನ್ನು ಗಮನದಲ್ಲಿ ಇಟ್ಟುಕೊಂಡು ಬೆಳೆಗಾರರಿಗೆ ಉತ್ತಮ ಬೆಲೆ ನೀಡಿ ಎಳೆನೀರನ್ನು ಖರೀದಿಸಿದರೆ ನಿಮಗೆ ಒಳ್ಳೆಯದಾಗುತ್ತದೆ. ರೈತ ಕಷ್ಟಪಟ್ಟು ಬೆಳೆದರೆ ಮಾತ್ರ ವ್ಯಾಪಾರಿಗಳು ಖರೀದಿಸಲು ಸಾಧ್ಯ. ರೈತನೇ ಇಲ್ಲದಿದ್ದಲ್ಲಿ ವ್ಯಾಪಾರಿಗಳು ಏನು ಮಾಡಲು ಸಾಧ್ಯ? ಎಳೆನೀರು ಮಾರುಕಟ್ಟೆಗೆ ಬೇಕಾಗಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ನಾನು ಸಿದ್ದನಿದ್ದೇನೆ. ರೈತರಿಗೆ ಉತ್ತಮ ಬೆಲೆ ನೀಡಿ ಅವರನ್ನು ಪ್ರೋತ್ಸಾಹಿಸುವ ಕೆಲಸ ಮಾಡಿ. ಪ್ರತಿದಿನ ವ್ಯಾಪಾರ ಮಾಡುವ ಸ್ಥಳವಾಗಿರುವುದರಿಂದ ಅಧಿಕಾರಿಗಳು ಮತ್ತು ವ್ಯಾಪಾರಸ್ಥರು ಮಾರುಕಟ್ಟೆಯ ಸ್ವಚ್ಚತೆಯ ಕಡೆಗೆ ಗಮನ ನೀಡಿ ಸಾರ್ವಜನಿಕರಿಂದ ಹಾಗೂ ರೈತರುಗಳಿಂದ ಯಾವುದೇ ರೀತಿಯ ದೂರುಗಳು ಬರದಂತೆ ಕೆಲಸ ನಿರ್ವಹಿಸಬೇಕು. ರೈತರು ಉಳಿದರೆ ಮಾತ್ರ ನಾವು, ನೀವೆಲ್ಲರೂ ವ್ಯಾಪಾರ ವಹಿವಾಟು ಮಾಡಲು ಸಾಧ್ಯ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular