Tuesday, August 12, 2025
Google search engine

Homeರಾಜ್ಯಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿ ದಿನೇಶ್ ಗೂಳಿಗೌಡ ನೇಮಕ

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿ ದಿನೇಶ್ ಗೂಳಿಗೌಡ ನೇಮಕ

ಬೆಂಗಳೂರು: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿಗಳು ಮಹತ್ವದ ಯೋಜನೆಗಳಾಗಿ ಪರಿಗಣಿಸಲ್ಪಡುತ್ತಿವೆ. ಈ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣೆಗೆ ‘ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’ವನ್ನು ಸರ್ಕಾರ ರಚಿಸಿದೆ. ಈ ಪ್ರಾಧಿಕಾರದ ಉಪಾಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರನ್ನು ನೇಮಕ ಮಾಡಲಾಗಿದೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬರುವಂತಿದೆ.

ಈ ವರ್ಷ ಜನವರಿಯಲ್ಲಿ ರಾಜ್ಯ, ಜಿಲ್ಲಾ, ತಾಲೂಕು ಹಾಗೂ ಬಿಬಿಎಂಪಿ ಮಟ್ಟದಲ್ಲಿ ಪ್ರಾಧಿಕಾರ ಹಾಗೂ ಅನುಷ್ಠಾನ ಸಮಿತಿಗಳನ್ನು ರಚಿಸಲಾಗಿತ್ತು. ಪ್ರಾಧಿಕಾರದಲ್ಲಿ ಒಬ್ಬ ಅಧ್ಯಕ್ಷ, ಐದು ಉಪಾಧ್ಯಕ್ಷರು ಹಾಗೂ 31 ಜಿಲ್ಲೆಗಳ ಪ್ರತಿನಿಧಿಗಳಾಗಿ ಸದಸ್ಯರಿದ್ದಾರೆ. ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ಹಾಗೂ ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುತ್ತದೆ.

ವಿಧಾನಸಭೆಯಲ್ಲಿಯೂ ಸಮಿತಿ ರಚನೆಯಾಗಲಿದ್ದು, ಕಾರ್ಯಕರ್ತರನ್ನೊಳಗೊಂಡ 31 ಸದಸ್ಯರ ತಂಡವು ಯೋಜನೆಗಳ ಮೇಲ್ವಿಚಾರಣೆಯಲ್ಲಿ ತೊಡಗಿಸಿಕೊಳ್ಳಲಿದೆ. ಜಿಲ್ಲಾಮಟ್ಟದಲ್ಲಿಯೂ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರನ್ನೊಳಗೊಂಡ ಸಮಿತಿಗಳ ಸ್ಥಾಪನೆಯಾಗುತ್ತದೆ. ಈ ಪ್ರಾಧಿಕಾರ ಮತ್ತು ಸಮಿತಿಗಳು ಯೋಜನೆಗಳ ನಿಷ್ಠುರ ಅನುಷ್ಠಾನಕ್ಕೆ ನಿರಂತರ ಕಾರ್ಯ ನಿರ್ವಹಿಸಲಿವೆ.

RELATED ARTICLES
- Advertisment -
Google search engine

Most Popular