ಹಾಸನ : ಸ್ವಂತ ಉದ್ಯೋಗ ಮಾಡಲು ಇಚ್ಛಿಸುವವರಿಗೆ, ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿಗೆ ಇದೊಂದು ಸುವರ್ಣಾವಕಾಶ. ವ್ಯವಸ್ಥಿತವಾಗಿ ಸರ್ಕಾರದ ಸಹಾಯ ಪಡೆದುಕೊಂಡು ಶಿಸ್ತು ಬದ್ಧವಾಗಿ ಉದ್ದಿಮೆ ಮಾಡುವುದರ ಮೂಲಕ ಆರ್ಥಿಕ ಅಭಿವೃದ್ಧಿ ಹೊಂದಿ ಯಶಸ್ವಿಯಾಗುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ತಿಳಿಸಿದ್ದಾರೆ.
ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ (Pಒಈಒಇ) ಯೋಜನೆಯ ಕುರಿತು ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿAದು ಏರ್ಪಡಿಸಿದ್ದ ಜಿಲ್ಲಾಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿಗಾಗಿ ಇರುವ ಯೋಜನೆ ಇದಾಗಿದೆ. ರೈತರು ಹೊಲಹುತ್ತು, ಬಿತ್ತನೆಮಾಡಿ ಮಾರುಕಟ್ಟೆಗೆ ಬೆಳೆ ನೀಡಿದರೆ ಎಷ್ಟೋ ಬಾರಿ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುವುದಿಲ್ಲ. ಬೆಳೆ ರೋಗ, ನೀರಿನ ಅಭಾವ ಹೀಗೆ ನಾನಾ ಸಮಸ್ಯೆಗಳಿಂದ ರೈತ ಸಂಕಷ್ಟಕ್ಕೆ ಸಿಲುಕುತ್ತಾನೆ. ಅಂತಹ ಸಂದರ್ಭದಲ್ಲಿ ಈ ಕಿರು ಉದ್ಯಮಗಳು ಕೈ ಹಿಡಿಯುತ್ತವೆ ಎಂದರು.
ಕೃಷಿ ಜೊತೆಗೆ ಕೃಷಿ ಆಧಾರಿತ ಉದ್ಯಮಗಳಿಗೆ ಹೆಚ್ಚಿನ ಒತ್ತು ನೀಡಿ ಎಂದರಲ್ಲದೆ, ಕೃಷಿಯಲ್ಲಿ ಶೇ.90 ರಷ್ಟು ರೈತ ಮಹಿಳೆಯರೇ ಕೆಲಸ ಮಾಡುವವರಿದ್ದಾರೆ. ಹಾಗಾಗಿ ಮಹಿಳೆಯರು ಈ ಯೋಜನೆಯ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಿ ಎಂದು ಕರೆ ನೀಡಿದರು.
ಸ್ತ್ರೀ ಶಕ್ತಿ, ಸ್ವ-ಸಹಾಯ ಗುಂಪಿನ ಮಹಿಳೆಯರು ಹೆಚ್ಚಿನ ಮಾಹಿತಿ ತಿಳಿದುಕೊಂಡು ಸದುಪಯೋಗ ಪಡೆದುಕೊಳ್ಳಿ. ಸಕಲೇಶಪುರ ಭಾಗದಲ್ಲಿ ಕಾಫಿ, ಚನ್ನರಾಯಪಟ್ಟಣ ತಾಲೂಕು ಭಾಗದಲ್ಲಿ ತೆಂಗು, ಹೀಗೆ ಒಂದೊಂದು ಭಾಗದಲ್ಲಿ ಒಂದೊಂದು ವಿಶೇಷತೆ ಇರುತ್ತದೆ. ಮತ್ತು ಒಬ್ಬೊಬ್ಬರಿಗೆ ಒಂದೊಂದು ಕರಕುಶಲತೆ ಇರುತ್ತದೆ. ಈ ಉದ್ದಿಮೆಯನ್ನು ಪ್ರಾರಂಭಿಸುವ ಮೂಲಕ ಸ್ವಯಂ ಉದ್ಯೋಗವಂತರಾಗಿ ಎಂದು ತಿಳಿಸಿದರು.
ರೈತರು ಕಿರು ಉದ್ಯಮ ಮಾಡಲು ಕೇಂದ್ರ ಸರ್ಕಾರದಿಂದ ೬ ಲಕ್ಷ ಹಾಗೂ ರಾಜ್ಯ ಸರ್ಕಾರದಿಂದ ೯ ಲಕ್ಷ ಸೇರಿದಂತೆ ಒಟ್ಟು ೧೫ ಲಕ್ಷ ಸಹಾಯಧನ ನೀಡಲಾಗುತ್ತಿದೆ. ಈ ಉದ್ಯಮದ ಕುರಿತು ರೈತರಿಗೆ ಗೊಂದಲಗಳಿದ್ದಲ್ಲಿ ಬಗೆಹರಿಸಿಕೊಳ್ಳಲು, ಮಾಹಿತಿ ತಿಳಿದುಕೊಳ್ಳಲು ಪ್ರೋತ್ಸಾಹ ನೀಡಿ ಶಕ್ತಿ ತುಂಬಬೇಕು ಎಂದ ಅಧಿಕಾರಿಗಳಿಗೆ ತಿಳಿಸಿದರು.
ಕೆಫೆಕ್ ವ್ಯವಸ್ಥಾಪಕ ನಿರ್ದೇಶಕರಾದ ಶಿವಪ್ರಕಾಶ್ ಅವರು ಮಾತನಾಡಿ ಕಿರು ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವ ಮೂಲಕ ಇತರರಿಗೂ ಸ್ಪೂರ್ತಿ ನೀಡುವಂತೆ ತಿಳಿಸಿದರಲ್ಲದೆ, ಒಂದು ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪನೆ ಮಾಡಿದರೆ 10 ಜನರಿಗೆ ಉದ್ಯೋಗ ಸೃಷ್ಟಿ ಆಗುತ್ತದೆ ಜೊತೆಗೆ ಸ್ಥಳೀಯ ರೈತರಿಗೆ ಮೌಲ್ಯವರ್ಧನೆ ದೊರೆಯುತ್ತದೆ ಎಂದು ತಿಳಿಸಿದರು.
ಒಬ್ಬರು ರೈತರು 5 ಜನ ರೈತರಿಗೆ ಈ ಯೋಜನೆಯ ಕುರಿತಾಗಿ ಮಾಹಿತಿಯನ್ನು ನೀಡಿದರೆ ಬಹಳ ಸದುಪಯೋಗವಾಗುತ್ತದೆ. ಆಹಾರವನ್ನು ಸಂಸ್ಕರಣೆ ಮಾಡಿ ಮಾರಾಟ ಮಾಡುತ್ತಾರೋ ಅಂತಹವರಿಗೆ ಪ್ರೋತ್ಸಾಹ ನೀಡಿ ಎಂದ ಅವರು ಸಬ್ಸಿಡಿ ಆಧಾರಿತ ಸಾಲ ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದರು.
ಜಂಟಿ ಕೃಷಿ ನಿರ್ದೇಶಕರಾದ ರಮೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಆಹಾರ ಸಂಸ್ಕರಣಾ ಚಟುವಟಿಕೆಗಳಲ್ಲಿ ತೊಡಗಿರುವ ಸ್ವ-ಸಹಾಯ ಸಂಘಗಳ ಸದಸ್ಯರುಗಳಿಗೆ ದುಡಿಯುವ ಬಂಡವಾಳ ಮತ್ತು ಸಣ್ಣ ಉಪಕರಣಗಳ ಖರೀದಿಗಾಗಿ ಪ್ರತಿ ಸದಸ್ಯರಿಗೆ ಗರಿಷ್ಟ ರೂ. 40,000 ಕಡಿಮೆ ಬಡ್ಡಿ ದರದ ಸಾಲದ ಜೊತೆಗೆ ಪ್ರತಿ ಸ್ವ-ಸಹಾಯ ಸಂಘಕ್ಕೆ ಗರಿಷ್ಟ ರೂ. 4 ಲಕ್ಷ ಪಡೆಯಲು ಅವಕಾಶವಿದೆ ಎಂದು ತಿಳಿಸಿದರು.
ಸಾಮಾನ್ಯ ಮೂಲಭೂತ ಸೌಕರ್ಯ ಸೃಷ್ಟಿಗೆ ಶೇ. 35 ರಷ್ಟು ಸಾಲ ಸಂಪರ್ಕಿತ ಸಹಾಯ ಧನ, ಗರಿಷ್ಟ ಸಹಾಯಧನ ರೂ.3 ಕೋಟಿ ನೀಡಲಾಗುತ್ತಿದೆ. ಇದಕ್ಕೆ ರೈತ ಉತ್ಪಾದಕರ ಸಂಸ್ಥೆಗಳು/ಕAಪನಿಗಳು, ಸಹಕಾರಿಗಳು, ಸ್ವ- ಸಹಾಯ ಸಂಘಗಳು ಮತ್ತು ಅದರ ಒಕ್ಕೂಟಗಳು ಮತ್ತು ಸರ್ಕಾರಿ ಸಂಸ್ಥೆಗಳು ಅರ್ಹ ಸಂಸ್ಥೆಗಳಾಗಿವೆ. ಅರ್ಜಿದಾರರ ಸಂಸ್ಥೆಯ ಕನಿಷ್ಟ ವಹಿವಾಟು ಮತ್ತು ಅನುಭವದ ಯಾವುದೇ ಪೂರ್ವ ಷರತ್ತುಗಳಿಲ್ಲ. ವಿಂಗಡಣೆ, ಶ್ರೇಣೀಕರಣ, ಸಂಗ್ರಹಣೆ, ಸಾಮಾನ್ಯ ಸಂಸ್ಕರಣೆ, ಪ್ಯಾಕೇಜಿಂಗ್ ಮತ್ತು ಪ್ರಯೋಗಾಲಯ ಇತ್ಯಾದಿ ಘಟಕಗಳನ್ನು ಸ್ಥಾಪಿಸಲು ಅವಕಾಶವಿದೆ ಎಂದರು.
ಬ್ರಾAಡಿAಗ್ ಮತ್ತು ಮಾರುಕಟ್ಟೆ ಚಟುವಟಿಕೆಗಳಾದ ಪ್ಯಾಕೇಜಿಂಗ್, ಜಾಹೀರಾತು, ಸಾಮಾನ್ಯ ಬ್ರಾಂಡ್ ಅಭಿವೃದ್ದಿ, ಚಿಲ್ಲರೆ ಮಾರಾಟ ಸಂಸ್ಥೆಗಳೊAದಿಗೆ ಒಡಂಬಡಿಕೆ ಇತ್ಯಾದಿಗಳಿಗಾಗಿ ಶೇ. 50 ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ, ಇದಕ್ಕೆ ರೈತ ಉತ್ಪಾದಕರ ಸಂಸ್ಥೆಗಳು/ಕAಪನಿಗಳು, ಸಹಕಾರಿಗಳು, ಸ್ವ-ಸಹಾಯ ಸಂಘಗಳು, ಸಹಕಾರಿ ಸಂಸ್ಥೆಗಳು ಮತ್ತು ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ವಿಶೇಷ ಉದ್ದೇಶ ಸಂಸ್ಥೆ ಅರ್ಹ ಸಂಸ್ಥೆಗಳಾಗಿರುತ್ತವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಯೋಗೇಶ್, ಉದ್ಯಮಿದಾರರು, ರೈತರು ಮತ್ತಿತರರು ಭಾಗವಹಿಸಿದ್ದರು.