Friday, September 19, 2025
Google search engine

Homeಅಪರಾಧಕಾನೂನುಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ಕನಿಷ್ಠ ಸೌಲಭ್ಯ ಬೇಕು: ಇಂದು ಕೋರ್ಟ್‌ ತೀರ್ಮಾನ

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ಕನಿಷ್ಠ ಸೌಲಭ್ಯ ಬೇಕು: ಇಂದು ಕೋರ್ಟ್‌ ತೀರ್ಮಾನ

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಗೆ ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಇಂದು ಆದೇಶ ಪ್ರಕಟಿಸಲಿದೆ.

ದೋಷಾರೋಪ ಹೊರಿಸುವ ದಿನಾಂಕವನ್ನು ಕೂಡ ಇಂದು ಕೋರ್ಟ್ ನಿಗದಿಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಳೆದ ವಿಚಾರಣೆಯ ವೇಳೆ ದರ್ಶನ್ ಪರ ವಕೀಲರು ಸುಧೀರ್ಘವಾದ ವಾದ ಮಂಡನೆ ನಡೆಸಿದರು. ಪಕ್ಕದ ಸೆಲ್ ನಲ್ಲಿರುವ ಟೆರರಿಸ್ಟ್ ಗಳಿಗೆ ಕೇರಂ, ಟಿವಿ ಸೇರಿದಂತೆ ಎಲ್ಲಾ ಸೌಲಭ್ಯ ಒದಗಿಸಲಾಗಿದ್ದು ಕೇವಲ ಕೊಲೆ ಆರೋಪಿಯಾಗಿರುವ ನಟ ದರ್ಶನ್ ಗೆ ಕನಿಷ್ಠ ಸೌಲಭ್ಯ ನೀಡುತ್ತಿಲ್ಲ ಎಂದು ವಾದಿಸಿದ್ದರು.

RELATED ARTICLES
- Advertisment -
Google search engine

Most Popular