Wednesday, September 24, 2025
Google search engine

Homeಅಪರಾಧಕಾನೂನುಧರ್ಮಸ್ಥಳ ಬುರುಡೆ ಪ್ರಕರಣ: ಆರೋಪಿ ಚಿನ್ನಯ್ಯ ನ್ಯಾಯಾಲಯದಲ್ಲಿ ಹಾಜರುಪಡಿಸಿ BNSS 183 ಅಡಿಯಲ್ಲಿ ಹೇಳಿಕೆ ದಾಖಲು

ಧರ್ಮಸ್ಥಳ ಬುರುಡೆ ಪ್ರಕರಣ: ಆರೋಪಿ ಚಿನ್ನಯ್ಯ ನ್ಯಾಯಾಲಯದಲ್ಲಿ ಹಾಜರುಪಡಿಸಿ BNSS 183 ಅಡಿಯಲ್ಲಿ ಹೇಳಿಕೆ ದಾಖಲು

ಮಂಗಳೂರು (ದಕ್ಷಿಣ ಕನ್ನಡ) : ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಶಿವಮೊಗ್ಗ ಜೈಲಿನಿಂದ ಪೊಲೀಸರು ಬೆಳ್ತಂಗಡಿ ಕೋರ್ಟ್ ಗೆ ಕರೆದುಕೊಂಡು ಬಂದು ಹಾಜರುಪಡಿಸಿದರು.

ಈ ಪ್ರಕರಣದ ಬಗ್ಗೆ ಚಿನ್ನಯ್ಯ ಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದರು.
ಆರೋಪಿ ಚಿನ್ನಯ್ಯ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ ಎಚ್.ಟಿ ಮುಂದೆ ಹಜರುಪಡಿಸಿ ಹೇಳಿಕೆ ದಾಖಲಿಸುವ ಕಾರ್ಯ ಆರಂಭಿಸಲಾಗಿತ್ತು. ಸಂಜೆ ನ್ಯಾಯಾಲಯದ ಪ್ರಕ್ರಿಯೆಗಳನ್ನು ಮುಗಿಸಿ ಆತನನ್ನು ವಾಪಸ್ ಶಿವಮೊಗ್ಗ ಜೈಲಿಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.

ಜಡ್ಜ್‌ ಮುಂದೆ ಚಿನ್ನಯ್ಯ ಪ್ರಕರಣಕ್ಕೆ ಸಂಬಂಧಿಸಿ ಹೇಳಿಕೆ ನೀಡಿದ್ದಾನೆ. ಆದರೆ ಇದು ಪೂರ್ಣವಾಗಿಲ್ಲ ಎನ್ನಲಾಗಿದೆ. ಹೀಗಾಗಿ ಮತ್ತೆ ಸೆ.25 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಉಳಿದ ಹೇಳಿಕೆ ದಾಖಲು ಮಾಡಲು ಸೂಚನೆ ನೀಡಲಾಗಿದೆ.

RELATED ARTICLES
- Advertisment -
Google search engine

Most Popular