ಮಡಿಕೇರಿ: ವಿರಾಜಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ಹೆಗ್ಗಳ ಮಾರ್ಗದಲ್ಲಿ ಇಂದು ಅ. 09 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆ ವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಆರ್ಜಿ, ಬೇಟೋಳಿ, ಹೆಗ್ಗಳ, ರಾಮನಗರ, ಪೆರುಂಬಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.