Friday, October 10, 2025
Google search engine

Homeರಾಜ್ಯನೀರಿದ್ದರೆ ನಾಳೆ ಅಂತರ್ಜಲ ಸಂರಕ್ಷಣೆಯಲ್ಲಿ ಕರ್ನಾಟಕ ಏಷ್ಯಾದಲ್ಲಿ ಮುಂಚೂಣಿ ರಾಜ್ಯ: ಸಿಎಂ ಸಿದ್ದರಾಮಯ್ಯ

ನೀರಿದ್ದರೆ ನಾಳೆ ಅಂತರ್ಜಲ ಸಂರಕ್ಷಣೆಯಲ್ಲಿ ಕರ್ನಾಟಕ ಏಷ್ಯಾದಲ್ಲಿ ಮುಂಚೂಣಿ ರಾಜ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರಿದ್ದರೆ ನಾಳೆ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಸಣ್ಣ ನೀರಾವರಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ “ನೀರಿದ್ದರೆ ನಾಳೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾಗರಿಕತೆ ಬೆಳೆದದ್ದು-ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖಾ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ. ಜನರಿಗೆ ನೀರಿನ ಅಗತ್ಯ ಮತ್ತು ನೀರಿನ ಸ್ಥಿತಿ ಗತಿ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಸಬೇಕು ಎಂದು ಕರೆ ನೀಡಿದ್ದಾರೆ.

ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ8 ರಷ್ಟು ಹೆಚ್ಚಿನ‌ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ ಎಂದು ವಿವರಿಸಿದ್ದಾರೆ. 144 ತಾಲ್ಲೂಕುಗಳನ್ನು ಹೊರತು ಪಡಿಸಿ ಉಳಿದ ತಾಲ್ಲೂಕುಗಳಲ್ಲಿ ನೀರಿನ , ಅಂತರ್ಜಲದ ಪ್ರಮಾಣ ಕೊರತೆ ಇದೆ. ಈ ಕಾರಣಕ್ಕೇ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸುವ ಕೆ.ಸಿ.ವ್ಯಾಲ್ಯೂ ಯೋಜನೆ ಜಾರಿ ಮಾಡಲಾಯ್ತು. ಇದರಿಂದ ಈಗ ಅಂತರ್ಜಲ ವೃದ್ಧಿಯಾಗಿದೆ. ಆದರೆ ಇದನ್ನೂ ವಿರೋಧಿಸುವವರು ಇದ್ದಾರೆ ಎಂದಿದ್ದಾರೆ.

ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ ಖರ್ಚು ಮಾಡಿದ್ದೇವೆ. ಇದರಿಂದ ಅಂತರ್ಜಲ ಉತ್ತಮವಾಗಿ ವೃದ್ಧಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನು ನೀರಿಗಾಗಿ ನಾಳೆ ಯೋಜನೆಯ ರಾಯಭಾರಿ ಆಗಿರುವ ನಟ ವಸಿಷ್ಠ ಸಿಂಹ ಸಹ ಈ ಕಾರ್ಯಕ್ರಮದಲ್ಲಿ ಮಾತನಾಡಿದ್ದು, ಹಾಸನಾಂಬೆಯ ದರ್ಶನ ಆರಂಭ ಆಗುವ ದಿನದಂದೇ ಈ ಕಾರ್ಯಕ್ರಮ ಮಾಡುತ್ತಿರುವುದು ಬಹಳ ವಿಶೇಷ ಆಗಿದೆ. ನಾನು ಈ ರೀತಿಯ ಅದ್ಭುತವಾದ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಹಾಗೂ ರಾಯಭಾರಿ ಆಗಿರುವುದು ಬಹಳ ಸಂತೋಷ ನೀಡಿದೆ ಹಾಗೂ ಹೆಮ್ಮೆಯ ವಿಚಾರವಾಗಿದೆ ಎಂದು ಹೇಳಿದ್ದಾರೆ. ನಾವು ನೀರನ್ನ ಉಳಿಸಿ ಎಂದು ಹೇಳುವ ಪರಿಸ್ಥಿತಿ ನಿರ್ಮಾಣ ಆಗಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ. ಬೇಡಿಕೆ ಹೆಚ್ಚಾಗಿರುವುದರಿಂದ ಈ ರೀತಿ ಆಗುತ್ತಿದೆ. ಮೊದಲೆಲ್ಲ ಹಿರಿಯರು ಡ್ಯಾಂ ಕಟ್ಟುವ ಮೊದಲು ಸಹ ಮಳೆ ಕಡಿಮೆ ಇದ್ದಾಗ ಕೂಡ ನೀರಿನ ಅಭಾವ ಆಗದಂತೆ ನೋಡಿಕೊಂಡಿದ್ದೃು. ಆದರೆ ಈ ಟೆಕ್ನಾಲಜಿ ಮುಂದುವರೆದಿದೆ. ಡ್ಯಾಂಗಳು ಇದೆ, ಆದರೂ ನೀರಿನ ಅಭಾವ ಆಗುತ್ತಿದೆ. ಅತಿಯಾಗಿ ಮಳೆ ಆದರೆ ಪ್ರವಾಹ ಆಗುತ್ತದೆ, ಕಡಿಮೆ ಮಳೆ ಆದರೆ ಬರಗಾಲ ಕಾಡುತ್ತದೆ. ಈ ರೀತಿ ಪರಿಸ್ಥಿತಿ ಬಂದಿರುವುದು ಬಹಳ ನೋವಿನ ಸಂಗತಿ. ಒಂದು ಕೆರೆ ಅಥವಾ ನದಿ ಇದ್ದರೆ ನೂರಾರು ರೀತಿಯಾಗಿ ಉಪಯೋಗವಾಗುತ್ತದೆ. ನಾವು ಮುಂದಿನ ಪೀಳಿಗೆಗೆ ನೀರನ್ನ ಉಳಿಸುವ ಅವಶಕ್ಯತೆ ಕತೆ ಇದೆ ಎಂದಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜು, ಅರಣ್ಯ ಮತ್ತು ಪರಿಸರ ಖಾತೆ ಸಚಿವರಾದ ಈಶ್ವರ್ ಖಂಡ್ರೆ, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಮ್ಯಾಗ್ಸೆಸ್ಸೇ ಪ್ರಶಸ್ತಿ ಪುರಸ್ಕೃತ ಪರಿಸರವಾದಿ ರಾಜೇದ್ರ ಸಿಂಗ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular