ಮೈಸೂರು : ದೇಶದಲ್ಲಿ ಹುಂದುಳಿದ ವರ್ಗದವರೇ ಶೇ೭೫ ರಷ್ಟು ಇದ್ದು ನಮ್ಮ ನಾಯಕರಾದ ಸಿದ್ದರಾಮಯ್ಯ ಅವರನ್ನು ಮತ್ತು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಉದ್ದೇಶದಿಂದ ನಮ್ಮ ಈ ಸಂಘಟನೆ ಸ್ಥಾಪಿಸಲಾಗಿದ್ದು ಯುವಕರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಬೇಕು ಎಂದು ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯ ಕಾರ್ಯದ್ಯಕ್ಷ ಬಿ.ಶಿವಣ್ಣ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಅಹಿಂದ ಸಂಘಟನೆಯ ಹುಣಸೂರು, ಪಿರಿಯಾಪಟ್ಟಣ ಹಾಗೂ ಕೆ.ಆರ್.ನಗರ ತಾಲೂಕುಗಳ ಪದಾಧಿಕಾರಿಗಳಿಗೆ ನೇಮಕಾತಿ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದ ೩೧ ಜಿಲ್ಲೆಗಳಲ್ಲೂ ನಮ್ಮ ಸಂಘಟನೆಯನ್ನು ರಚಿಸಲಾಗಿದ್ದು ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡ, ಮಾದ್ಯಮ ಘಟಕ, ಮಹಿಳಾ ಘಟಕಗಳು, ರೈತ ಮೋರ್ಚಾಗಳನ್ನು ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ಬೂತ್ ಮಟ್ಟದಲ್ಲಿ ಘಟಕಗಳನ್ನು ಸ್ಥಾಪಿಸಿ ಸದಸ್ಯರು ಮತ್ತು ಪದಾಧಿಕಾರಿಗಳನ್ನು ಸಂಘಟಿಸಿ ಯಾವುದೇ ಚುನಾವಣೆಗೆ ಅಹಿಂದ ವರ್ಗದ ಪ್ರತಿನಿಧಿಗಳು ಆಯ್ಕೆಯಾಗುವಂತೆ ಮಾಡೋಣ ಎಂದು ತಿಳಿಸಿದರು.
ನಮ್ಮ ಸಂಘಟನೆಯ ವತಿಯಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಹಿಂದುಳಿದ, ಅಲ್ಪ ಸಂಖ್ಯಾತ, ಪರಿಶಿಷ್ಟ ಜಾತಿ ಮತ್ತು ಪಂಗಡದ ವರ್ದಗದವರನ್ನು ಗುರುತಿಸಿ ಅವರಿಗೆ ಶಕ್ತಿ ತುಂಬುವ ಮತ್ತು ನೋಂದವರ ನೆರವಿಗೆ ದಾವಿಸಿ ಅವರಿಗೆ ಸರ್ಕಾರದಿಂದ ದೊರೆಯುವ ಎಲ್ಲಾ ಸವಲತ್ತುಗಳನ್ನು ಕೊಡಿಸಲು ಕಾರ್ಯ ಯೋಜನೆ ರೂಪಿಸಿಕೊಂಡಿದ್ದು ಇದಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಕೋರಿದರು.
ಸಂವಿಧಾನದ ಮೂಲಕ ಭಾಬಾ ಸಾಹೇಬರು ಹಕ್ಕುಗಳನ್ನು ನೀಡಿದ್ದು ಮೀಸಲಾತಿಯಡಿ ವಿದ್ಯಾಭ್ಯಾಸ, ಉದ್ಯೋಗ ಮುಂತಾದ ಸವಲತ್ತುಗಳನ್ನು ಪಡೆದುಕೊಳ್ಳುತ್ತಿದ್ದು ನಮ್ಮ ಹಕ್ಕುಗಳ ರಕ್ಷಣೆ ಹಾಗೂ ರಾಜಕೀಯವಾಗಿ ಸಾಧನೆ ಮಾಡಲು ಪ್ರತಿಯೊಬ್ಬರು ಸಂಘಟಿತರಾಗಿ. ಎಂದರಲ್ಲದೇ ಪಧಾಧಿಕಾರಿಗಳು ಕೇವಲ ಅಧಿಕಾರಕ್ಕೆ ಅಂಟಿಕೊಳ್ಳದೆ ಸಂಘದ ಕಾರ್ಯ ಚಟುವಟಿಗಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅಭಿವೃದ್ಧಿ ಹಾಗೂ ಸಂಘದ ಉದ್ದೇಶವನ್ನು ಅರಿತು ಕೆಲಸ ನಿರ್ವಹಿಸಿ. ನಿಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಅಹಿಂದ ವರ್ಗದ ಏಳಿಗೆಗೆ ಅವಿರತವಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಹುಣಸೂರು, ಪಿರಿಯಾಪಟ್ಟಣ ಹಾಗೂ ಕೆ.ಆರ್.ನಗರ ತಾಲೂಕು ರಾಷ್ಟ್ರೀಯ ಅಹಿಂದ ಸಂಘಟನೆಯ ಪದಾಧಿಕಾರಿಗಳಿಗೆ ನೇಮಕಾತಿ ಪ್ರಮಾಣ ಪತ್ರ ನೀಡಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಶಂಕರಮೂರ್ತಿ, ಒಬಿಸಿ ಘಟಕದ ರಾಜ್ಯ ಕಾರ್ಯದ್ಯಕ್ಷ ರವಿಕುಮಾರ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಗರುಡುಗಂಬ ಕೆ.ಎಸ್.ಮಂಜುನಾಥ್, ಮೈಸೂರು ಜಿಲ್ಲಾಧ್ಯಕ್ಷ ಬಿ.ಎಂ.ಪಾಪಣ್ಣ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರತ್ನಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಜಿನಿ, ರೇಣುಕ ದಯಾನಂದ, ಹುಣಸೂರು ತಾಲೂಕು ಅಧ್ಯಕ್ಷ ಅಂಜನಿ, ಒಬಿಸಿ ಘಟಕದ ಅಧ್ಯಕ್ಷ ಜಾಬಗೆರೆ ಅಪ್ಪಾಜೀಗೌಡ, ಯುವ ಘಟಕದ ಅಧ್ಯಕ್ಷ ಬಿ.ಆರ್.ಕಾವಲು ರವಿ ಸೇರಿದಂತೆ ಇನ್ನಿತರರು ಇದ್ದರು.



