ವರದಿ :ಸ್ಟೀಫನ್ ಜೇಮ್ಸ್.
ಬೆಳಗಾವಿ
ಕಳೆದ ಎರಡು ವರ್ಷಗಳಿಂದ ಮಹಾನಗರ ಪಾಲಿಕೆ ಆಯುಕ್ತರಾಗಿ ಹಾಗೂ ಸ್ಮಾರ್ಟ್ ಸಿಟಿ ಪ್ರಭಾರ ಎಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶುಭ ಅವರನ್ನು ಗುರುವಾರ ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಅವರ ಬದಲಿಗೆ ಬೆಂಗಳೂರು ಸಂಜಯಗಾಂಧಿ ಟ್ರಾಮಾ ಮತ್ತು ಅಗ್ನಿ ಚಿಕಿತ್ಸೆ ಸಂಸ್ಥೆಯ ಮುಖ್ಯ ಆಡಳಿತಾಧಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ತಿಕ ಎಂ ಅವರನ್ನು ಬೆಳಗಾವಿ ಮಹಾನಗರ ಪಾಲಿಕೆಯ ನೂತನ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.



