Friday, November 28, 2025
Google search engine

Homeರಾಜ್ಯಸುದ್ದಿಜಾಲಸ್ಪೀಕರ್ ಯು.ಟಿ.ಖಾದರ್ ಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ಬೆಂಗಳೂರು ವಿವಿ

ಸ್ಪೀಕರ್ ಯು.ಟಿ.ಖಾದರ್ ಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ಬೆಂಗಳೂರು ವಿವಿ

ಬೆಂಗಳೂರು : ಇಲ್ಲಿನ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರು ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಗೆ ಗೌರವಾನ್ವಿತ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.

ರಾಜಭವನದ ಬ್ಯಾಂಕ್ವೇಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಪದವಿ ಪ್ರದಾನ ಮಾಡಿದರು. ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿ ಮಾತನಾಡಿದ ಅವರು, ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಸ್ವೀಕರಿಸಿರುವುದು ಸಾಕಷ್ಟು ಹೆಮ್ಮೆ ಮತ್ತು ಸಂತಸದ ವಿಷಯವಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಪದವಿಯಿಂದ ಗೌರವದ ಜೊತೆಗೆ ಜವಾಬ್ದಾರಿ ಕೂಡ ಹೆಚ್ಚಾಗಿದೆ. ಭವಿಷ್ಯದಲ್ಲೂ ಬೆಂಗಳೂರು ವಿಶ್ವವಿದ್ಯಾಲಯದ ಮೌಲ್ಯವನ್ನು, ವಿಶ್ವಾಸವನ್ನು ಎತ್ತಿ ಹಿಡಿಯುವ ದಾರಿಯಲ್ಲಿ ಸಾಗುತ್ತೇನೆ ಎಂದು ತಿಳಿಸಿದರು.

ಕಾಲೇಜು ದಿನಗಳಲ್ಲಿ ಡಾಕ್ಟರ್ ಆಗಬೇಕೆಂಬ ಕನಸಿತ್ತು. ಆದರೆ ವಿಜ್ಞಾನ ವಿಷಯದಲ್ಲಿ ಅಂಕಗಳು ಕಡಿಮೆ ಬರುತ್ತಿತ್ತು. ಹಾಗಾಗಿ ಇದು ಆಗದ ಕೆಲಸ ಎಂದು ಡಾಕ್ಟರ್ ಕನಸು ಬಿಟ್ಟು ಕಾನೂನು ವಿಷಯಕ್ಕೆ ಸೇರಿದೆ, ಮುಂದೆ ಆರೋಗ್ಯ ಸಚಿವನಾಗಿ ಕಾರ್ಯನಿರ್ವಹಿಸುವ ಅವಕಾಶ ಲಭಿಸಿತು. ಡಾಕ್ಟರ್ ಆಗದಿದ್ದರೂ ಇಂದು ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ಡಾಕ್ಟರೇಟ್ ಲಭಿಸಿರುವುದು ಸಾಕಷ್ಟು ಖುಷಿಯ ವಿಷಯ. ಈ ಪ್ರೀತಿ, ಸಹಕಾರ ಸದಾ ನೆನಪಿನಲ್ಲಿಟ್ಟುಕೊಳ್ಳುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದರು.

ಸಮಾಜ ಸಾಮರಸ್ಯದಿಂದ ಸಾಗಬೇಕು, ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರೂ ಒಟ್ಟಾಗಿ ಪ್ರೀತಿ, ವಿಶ್ವಾಸದಿಂದ ಬದುಕಬೇಕು. ಭಾರತೀಯರೆಲ್ಲರೂ ಒಗ್ಗಟಾಗಿ ಸಾಗೋಣ ಎಂದು ಆಶಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳು ಡಾ.ಜಯಕರ ಎಸ್.ಎಂ, ಕುಲಸಚಿವರು ಕೆ.ಟಿ.ಶಾಂತಲಾ, ಕುಲಸಚಿವರು ಮೌಲ್ಯಮಾಪನ ಪ್ರೊ.ಸಿ.ಎಸ್.ಕರಿಗಾರ್ ಸೇರಿದಂತೆ ಹಿರಿಯ ಅಧಿಕಾರಿಗಳು, ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular