Saturday, December 27, 2025
Google search engine

Homeರಾಜ್ಯರಾಜ್ಯ ಸರ್ಕಾರವನ್ನು ಕೇಂದ್ರ ಸರ್ಕಾರ ಸರಿಯಾಗಿ ಬಳಸಿಕೊಳ್ಳುತ್ತಿಲ್ಲ : ಸಚಿವ ಸೋಮಣ್ಣ

ರಾಜ್ಯ ಸರ್ಕಾರವನ್ನು ಕೇಂದ್ರ ಸರ್ಕಾರ ಸರಿಯಾಗಿ ಬಳಸಿಕೊಳ್ಳುತ್ತಿಲ್ಲ : ಸಚಿವ ಸೋಮಣ್ಣ

ರಾಮನಗರ: ಅಮೃತ ಭಾರತ ನಿಲ್ದಾಣ ಯೋಜನೆ ಅಡಿಯಲ್ಲಿ ಅಂದಾಜು 20.96 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾದ ರಾಮನಗರ ರೈಲು ನಿಲ್ದಾಣದ ಆಧುನೀಕರಣ ಕಾಮಗಾರಿಯನ್ನು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಪರಿಶೀಲಿಸಿದ್ದು, ಸಂಚಾರಿ ಪ್ರದೇಶವನ್ನು ನವೀಕರಿಸುವುದು, ಪಾದಚಾರಿ ಸೇತುವೆ, ಪ್ಲಾಟ್‌ಫಾರ್ಮ್ ಶೆಲ್ಟರ್‌ಗಳು ಮತ್ತು ಕಾಯುವ ಕೋಣೆಗಳ ನಿರ್ಮಾಣ, ದ್ವಿಚಕ್ರ ವಾಹನಗಳು ಮತ್ತು ನಾಲ್ಕು ಚಕ್ರಗಳ ವಾಹನಗಳಿಗೆ ಹೆಚ್ಚುವರಿ ಪಾರ್ಕಿಂಗ್ ವಲಯಗಳು, ಮೂರು ಲಿಫ್ಟ್‌ಗಳು ಮತ್ತು ಒಂದು ಎಸ್ಕಲೇಟರ್ ಅಳವಡಿಕೆ ಮತ್ತು ಹೊಸ ಶೌಚಾಲಯಗಳು ಈ ಕಾಮಗಾರಿಯಲ್ಲಿ ಸೇರಿವೆ ಎಂದು ತಿಳಿಸಿದರು.

ಈ ಬಗ್ಗೆ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಸೋಮಣ್ಣ, ಬೆಂಗಳೂರು ದಕ್ಷಿಣ ಜಿಲ್ಲೆ ಬೆಳವಣಿಗೆಗೆ ಅಪಾರ ಸಾಮರ್ಥ್ಯವನ್ನು ಹೊಂದಿದೆ ಮತ್ತು ಇದನ್ನು ಸಾಧಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ನಿಕಟ ಸಮನ್ವಯಕ್ಕೆ ಕರೆ ನೀಡಿದರು. ಈ ಪ್ರದೇಶದಲ್ಲಿ MEMU ರೈಲು ಸೇವೆಗಳು ದೈನಂದಿನ ಪ್ರಯಾಣಿಕರಿಗೆ ಪ್ರಯೋಜನಕಾರಿ ಎಂದು ಸಾಬೀತಾಗಿದೆ ಎಂದು ಹೇಳಿದರು.

ದೇಶಾದ್ಯಂತ ರಸ್ತೆ ಮೇಲ್ಸೇತುವೆಗಳು ಮತ್ತು ರಸ್ತೆ ಕೆಳ ಸೇತುವೆಗಳ ವೆಚ್ಚವನ್ನು ಕೇಂದ್ರವು ಭರಿಸಲಿದೆ. ದೇಶಾದ್ಯಂತ ಸುಮಾರು ಶೇ. 98 ರಷ್ಟು ಟ್ರ್ಯಾಕ್ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡಿದೆ ಹಾಗೂ ರಾಜ್ಯದಲ್ಲಿ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಉತ್ತಮವಾಗಿ ಪ್ರಗತಿಯಲ್ಲಿದೆ ಎಂದರು, ನಂತರ ಅವರು ಬಿಡದಿ ರೈಲು ನಿಲ್ದಾಣವನ್ನು ಸಹ ಪರಿಶೀಲಿಸಿ, ರೈಲ್ವೆ ಜಾಲದ ಮೂಲಕ ವಾಹನಗಳ ಸಾಗಣೆಯನ್ನು ನಿರ್ಣಯಿಸಲು ಅವರು ಟೊಯೋಟಾ ಉತ್ಪಾದನಾ ಘಟಕಕ್ಕೂ ಭೇಟಿ ನೀಡಿದರು.

ನಾನು ಈ ಹಿಂದೆಯೇ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಚೀಫ್ ಸೆಕ್ರೆಟರಿ ಎಲ್ಲರಿಗೂ ಹೇಳಿದ್ದೇನೆ. ಯಾರೂ ಕೂಡಾ ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ. ಕೇಂದ್ರ ಸರ್ಕಾರವನ್ನು ಸರಿಯಾಗಿ ರಾಜ್ಯ ಸರ್ಕಾರ ಬಳಸಿಕೊಳ್ಳುತ್ತಿಲ್ಲ. ದಿನ ಬೆಳಾಗದರೆ ಕೇಂದ್ರ ಸರ್ಕಾರವನ್ನು ಟೀಕಿಸುವುದೆ ರಾಜ್ಯ ಸರ್ಕಾರದ ಕೆಲಸವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular