ಮದ್ದೂರು: ಮಂಡ್ಯ ಕೃಷಿಕ್ ಸರ್ವೋದಯ ಟ್ರಸ್ಟ್ ನ ಧರ್ಮದರ್ಶಿಯಾಗಿ ನಗರದ ಎಂ. ಹೆಚ್. ಚನ್ನೆಗೌಡ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಸಿ. ಅಪೂರ್ವ ಚಂದ್ರ ಅವರನ್ನ ನೇಮಕ ಮಾಡಲಾಗಿದೆ.
ಕಳೆದ 30 ವರ್ಷಗಳಿಂದ ಎಂ. ಹೆಚ್. ಚನ್ನೆಗೌಡ ವಿದ್ಯಾ ಸಂಸ್ಥೆಯಲ್ಲಿ ಕೃಷಿಕ್ ಸರ್ವೋದಯ ಶಾಖೆಯನ್ನು ಪ್ರಾರಂಭಿಸಿ ತಾಲೂಕಿನ ಯುವಕ-ಯುವತಿಯರಿಗೆ ಉತ್ತಮ ಮಾರ್ಗದರ್ಶನ ನೀಡುತ್ತಿರುವುದನ್ನು ಪರಿಗಣಿಸಿ ಮಂಡ್ಯ ಕೃಷಿಕ್ ಸರ್ವೋದಯ ಟ್ರಸ್ಟ್ ನ 146ನೇ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ ನ ಅಧ್ಯಕ್ಷ ಟಿ. ತಿಮ್ಮೇಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
ಅಭಿನಂದನೆ:
ಮಂಡ್ಯ ಕೃಷಿಕ್ ಸರ್ವೋದಯ ಟ್ರಸ್ಟ್ ನ ಧರ್ಮದರ್ಶಿಯಾಗಿ ನೇಮಕಗೊಂಡಿರುವ ಸಿ. ಅಪೂರ್ವಚಂದ್ರ ಅವರನ್ನು ಎಂ. ಹೆಚ್. ಚನ್ನೇಗೌಡ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಂ.ಸ್ವರೂಪ ಚಂದು, ಖಜಾಂಚಿ ಜಿ.ಎಸ್. ಶಿವರಾಂ, ನಿರ್ದೇಶಕರುಗಳು ಹಾಗೂ ಅಂಗ ಸಂಸ್ಥೆಯ ಮುಖ್ಯಸ್ಥರುಗಳು ಅಭಿನಂದಿಸಿದ್ದಾರೆ.



