ಅಡಿಕೆ ಕಳ್ಳತನ ಮಾಡಿದ ಇಬ್ಬರನ್ನು ಬಂಧಿಸಿದ ಘಟನೆ ದಕ್ಷಿಣ ಕನ್ನಡದ ಕಡಬದಲ್ಲಿ ನಡೆದಿದೆ. ಸತೀಶ್ ಎಂಬುವವರು ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ 11/2026 ಕಲಂ:303(2) ಬಿಎನ್ ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು 1ನೇ ಆರೋಪಿತ ಜಯಂತನನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. 2ನೇ ಆರೋಪಿತ ಲಿಂಗಪ್ಪ ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾನೆ. ಕಳವು ಮಾಡಿದ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ.
ವರದಿ: ಶಂಶೀರ್ ಬುಡೋಳಿ



