ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ನಗರದ ಕದ್ರಿ ಪೊಲೀಸ್ ಠಾಣೆ ಮುಂಭಾಗ ಯುದ್ದ ಸ್ಮಾರಕದ ಬಳಿ ನಿಲ್ಲಿಸಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ನಡೆದಿದೆ.
ಕಾರನ್ನು ಸ್ಮಾರಕದ ಸಮೀಪ ಪಾರ್ಕ್ ಮಾಡಲಾಗಿದ್ದು, ಇದ್ದಕ್ಕಿದ್ದ ಹಾಗೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಕಾರಿನಲ್ಲಿ ಯಾರೂ ಇರಲಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 2.40 ಲಕ್ಷ ಕೊಟ್ಟು ಇವತ್ತಷ್ಟೆ ಕಾರು ಖರೀದಿ ಮಾಡಿದ್ದರು ಎನ್ನಲಾಗಿದೆ.
ಅಗ್ನಿಶಾಮಕದಳ, ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.