Friday, April 11, 2025
Google search engine

Homeಅಪರಾಧಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ; ಆನೆ ದಂತ ಚೋರರ ಬಂಧನ

ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ; ಆನೆ ದಂತ ಚೋರರ ಬಂಧನ

ಬೆಂಗಳೂರು: ಅರಣ್ಯ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿ ಇಬ್ಬರು ಆನೆ ದಂತ ಚೋರರನ್ನು ಬಂಧಿಸಿದ್ದಾರೆ. ರಾಜನುಕುಂಟೆ ಏರ್ಪೋಟ್ ರಸ್ತೆ ಸಾದರಹಳ್ಳಿ ಬಳಿ ಆರೋಪಿಗಳಾದ ಮೋಹನ್, ಆನಂದ್ ಹಾಗೂ ವಿನೋದ್​ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಬೆಲೆ ಬಾಳುವ 8.5 ಮತ್ತು 9 ಕೆ.ಜಿ ಎರಡು ಆನೆ ದಂತವನ್ನು ಜೊತೆಗೆ ಕೃತ್ಯಕ್ಕೆ ಬಳಸಲಾದ ಕಾರೊಂದನ್ನು ವಶಕ್ಕೆ ಪಡೆಯಲಾಗಿದೆ.

ಘಟನೆ ವಿವರ

ಇಂದು(ಶನಿವಾರ) ಬೆಳಗ್ಗೆ 10 ಗಂಟೆಯ ಸುಮಾರಿಗೆ ಬೆಂಗಳೂರಿಗೆ KA-53-D-9181 ವಾಹನ ಸಂಖ್ಯೆಯ ಕಾರೊಂದರಲ್ಲಿ ಅತ್ಯಂತ ಬೆಲೆ-ಬಾಳುವ ಎರಡು ಆನೆಯ ದಂತಗಳನ್ನು ಮಾರಾಟಕ್ಕಾಗಿ ತೆಗೆದುಕೊಂಡು ಹೋಗುತ್ತಿರುವ ಕುರಿತು ಬೆಂಗಳೂರು ನಗರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಖಚಿತ ಮಾಹಿತಿ ಬರುತ್ತದೆ. ಕೂಡಲೇ ಕಾರ್ಯಪ್ರವೃತ್ತರಾಗಿ, ಬೆಂಗಳೂರು ಮತ್ತು ಯಲಹಂಕ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ಎರಡು ಪ್ರತ್ಯೇಕ ತಂಡಗಳನ್ನು ರಚಿಸಿಕೊಂಡು ಕಾಯುತ್ತಿದ್ದ ಸಮಯದಲ್ಲಿ ಬೆಂಗಳೂರು ವಲಯ ವ್ಯಾಪ್ತಿಯಲ್ಲಿ ವಾಹನವನ್ನ ತಡೆದು, ಪರೀಕ್ಷಿಸಲಾಗುತ್ತದೆ. ಈ ವೇಳೆ ವಾಹನದಲ್ಲಿ ಎರಡು ಆನೆ ದಂತಗಳು ಕಂಡುಬರುತ್ತವೆ. ಕೂಡಲೇ ಕೃತ್ಯದಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳಾದ ಮೋಹನ್​, ಆನಂದ್​ ಹಾಗೂ ವಿನೋದ್​ ಎಂಬುವವರನ್ನು ಬಂಧಿಸಲಾಗಿದೆ.

RELATED ARTICLES
- Advertisment -
Google search engine

Most Popular