Friday, April 11, 2025
Google search engine

HomeUncategorizedರಾಷ್ಟ್ರೀಯಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಕೇದಾರನಾಥ: ಆರು ಮಂದಿ ಪ್ರಯಾಣಿಕರಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ಕೇದಾರನಾಥದ ಗುಡ್ಡಗಾಡು ಪ್ರದೇಶದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹೆಲಿಪ್ಯಾಡ್‌ಗೆ ಸರಿಸುಮಾರು 100 ಮೀಟರ್ ದೂರದಲ್ಲೇ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ.

ಅದೃಷ್ಟವಶಾತ್ ಪೈಲಟ್ ಸೇರಿದಂತೆ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಿರ್ಸಿಯ ಹೆಲಿಪ್ಯಾಡ್‌ನಿಂದ ಕೇದಾರನಾಥ ಧಾಮಕ್ಕೆ 6 ಮಂದಿ ಪ್ರಯಾಣಿಕರನ್ನು ಹೊತ್ತು ಪೈಲಟ್‌ನೊಂದಿಗೆ ಬರುತ್ತಿದ್ದ ಕೆಸ್ಟ್ರೆಲ್ ಏವಿಯೇಷನ್‌ನ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ ಕೂಡಲೇ ಪೈಲೆಟ್ ಗುಡ್ಡಗಾಡು ಪ್ರದೇಶದಲ್ಲೇ ಲ್ಯಾಂಡ್ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular