Friday, April 18, 2025
Google search engine

Homeಅಪರಾಧಕಾವೇರಿ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವು

ಕಾವೇರಿ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವು

ಚಾಮರಾಜನಗರ: ಕಾವೇರಿ ನೀರಿನ ಸಂಬಂಧ ಕಾನೂನು ಸುವ್ಯವಸ್ಥೆಗಾಗಿ ಕೊಳ್ಳೇಗಾಲಕ್ಕೆ ಬಂದಿದ್ದ ಕೆಎಸ್‌ಆರ್‌ಪಿ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು ನಡೆದಿದೆ.

ಮೋಹನ್ (೪೪) ಮೃತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್. ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದು, ಈ ಸಂಬಂಧ ಗಲಭೆಗಳು ಉಂಟಾಗದಂತೆ ಎಚ್ಚರ ವಹಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಕೆಎಸ್‌ಆರ್‌ಪಿ ಮೈಸೂರು ಬೆಟಾಲಿಯನ್ ೨೩ ಮಂದಿ ಕೊಳ್ಳೇಗಾಲದಲ್ಲಿ ಕರ್ತವ್ಯ ನಿರ್ವಹಿಸಲು ಕಳೆದ ಎರಡು ದಿನಗಳ ಹಿಂದೆ ಬಂದು ಸಾರ್ವಜನಿಕರ ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಂಡಿದ್ದರು.

ಕರ್ತವ್ಯ ಮುಗಿಸಿಕೊಂಡು ಹಾಸ್ಟೆಲ್‌ನಲ್ಲಿ ತಂಗಿದ್ದ ಮುಖ್ಯ ಪೇದೆ ಮೋಹನ್ ಅವರಿಗೆ ಹಠಾತ್ ಹೃದಯಾಘಾತವಾಗಿ ಅಸುನೀಗಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಒಪ್ಪಿಸಲಾಗಿದೆ. ಮೃತ ಮೋಹನ್ ಮೂಲತಃ ಮಡಿಕೇರಿ ಜಿಲ್ಲೆಯ ನಾಪ್ಲೋಕು ಹೋಬಳಿಯ ಕಕ್ಕಬೇ ಗ್ರಾಮದವರು ಎಂದು ತಿಳಿದುಬಂದಿದೆ.

RELATED ARTICLES
- Advertisment -
Google search engine

Most Popular