Tuesday, April 22, 2025
Google search engine

Homeರಾಜ್ಯಸುದ್ದಿಜಾಲನಾಳೆಯಿಂದ ನಾಮಪತ್ರ ಸ್ವೀಕಾರ: ಡಾ. ಅವಿನಾಶ್ ಮೆನನ್ ರಾಜೇಂದ್ರನ್

ನಾಳೆಯಿಂದ ನಾಮಪತ್ರ ಸ್ವೀಕಾರ: ಡಾ. ಅವಿನಾಶ್ ಮೆನನ್ ರಾಜೇಂದ್ರನ್

ರಾಮನಗರ: ಕೇಂದ್ರ ಚುನಾವಣಾ ಆಯೋಗದ ಆದೇಶದಂತೆ ನಾಳೆಯಿಂದ ಮಾ. ೨೮ ರಿಂದ ಏಪ್ರಿಲ್ ೪ ರವರೆಗೆ ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ, ಉಳಿದ ದಿನಗಳಂದು ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿಯ ಕೊಠಡಿ ಸಂಖ್ಯೆ ೨೦೫ರಲ್ಲಿ ನಾಮಪತ್ರಗಳನ್ನು ಸ್ವೀಕರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಿಳಿಸಿದರು.

ಅವರು ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.
ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕೇಂದ್ರ ಚುನಾವಣಾ ಆಯೋಗದ ಷರತ್ತುಗಳನ್ನು ಪಾಲಿಸಬೇಕು. ನಾಮಪತ್ರ ಸಲ್ಲಿಸುವ ಅಭ್ಯರ್ಥಿಯೊಂದಿಗೆ ೪ ಜನ ಪ್ರವೇಶಿಸಲು ಅವಕಾಶವಿರುತ್ತದೆ. ಓರ್ವ ಅಭ್ಯರ್ಥಿಯು ೪ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದ್ದು, ಒಂದು ನಾಮಪತ್ರದ ಜೊತೆ ಠೇವಣಿ ಮೊತ್ತ ಹಾಗೂ ಪೂರ್ಣ ಪ್ರಮಾಣದ ದಾಖಲಾತಿಗಳನ್ನು ಸಲ್ಲಿಸಬೇಕು ಎಂದು ತಿಳಿಸಿದರು.

ಪ್ರತಿದಿನ ಸ್ವೀಕರಿಸುವ ನಾಮಪತ್ರಗಳ ವಿವರಗಳನ್ನು ಅದೇ ದಿನ ಮಧ್ಯಾಹ್ನ ೩ ಗಂಟೆಯ ನಂತರ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿರುವ ನಾಮಫಲಕದಲ್ಲಿ ಅಳವಡಿಸಲಾಗುವುದು ಹಾಗೂ ಚುನಾವಣಾ ಆಯೋಗದ ವೆಬ್‌ಸೈಟಿನಲ್ಲಿಯೂ ಸಹ ಪ್ರಕಟಿಸಲಾಗುವುದು ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರು ಮಾತನಾಡಿ, ಚುನಾವಣಾಧಿಕಾರಿಗಳ ಕಚೇರಿಯ ೧೦೦ ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಗುರುತಿಸಿ ನಿಷೇಧಾಜ್ಞೆ ಜಾರಿ ಮಾಡಲಾಗುವುದು ಹಾಗೂ ಚುನಾವಣಾಧಿಕಾರಿಗಳ ಕಚೇರಿಯ ಸುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು ಎಂದು ತಿಳಿಸಿದರು.

ನಾಮಪತ್ರ ಸಲ್ಲಿಸುವ ಅಭ್ಯರ್ಥಿಯೊಂದಿಗೆ ೪ ಜನರ ಪ್ರವೇಶಕ್ಕೆ ಅನುಮತಿಯಿದ್ದು, ಅಭ್ಯರ್ಥಿಗಳೊಂದಿಗೆ ಬರುವವರಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ಆಸನದ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಅಭ್ಯರ್ಥಿಯು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ರ್‍ಯಾಲಿ ಮಾಡಿದ್ದಲ್ಲಿ ಕಡ್ಡಾಯವಾಗಿ ಸಂಬಂಧಪಟ್ಟ ಎಆರ್‌ಓ ಗಳಿಂದ ಅನುಮತಿ ಪಡೆದಿರಬೇಕು ಎಂದರು.

RELATED ARTICLES
- Advertisment -
Google search engine

Most Popular