Monday, April 21, 2025
Google search engine

HomeUncategorizedರಾಷ್ಟ್ರೀಯಬಿಹಾರ ಸಿಎಂ ನಿತೀಶ್​ ಕುಮಾರ್ ​ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಬಂಧನ

ಬಿಹಾರ ಸಿಎಂ ನಿತೀಶ್​ ಕುಮಾರ್ ​ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಬಂಧನ

ಬೆಂಗಳೂರು: ಬಿಹಾರ ಸಿಎಂ ನಿತೀಶ್​ ಕುಮಾರ್ ​ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಸೋನು ಪಾಸ್ವಾನ್​ ಅನ್ನು ಕರ್ನಾಟಕದಲ್ಲಿ ಬಿಹಾರ ಪೊಲೀಸರು ಬಂಧಿಸಿದ್ದಾರೆ.

ಸೋನು ಪಾಸ್ವಾನ್ ಕರ್ನಾಟಕದ ದಾವಣಗೆರೆಯಲ್ಲಿ ರೈಸ್ ಮಿಲ್ ​ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಆತ ಮೂಲತಃ ಬಿಹಾರದ ಸಮಸ್ತಿಪುರ ನಿವಾಸಿ ಎಂಬುದು ತಿಳಿದುಬಂದಿದೆ.

ಬಂಧಿತನನ್ನು ಬುಧವಾರ ರಾತ್ರಿ ಬಿಹಾರದ ಪಾಟ್ನಾಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಯು ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಳ್ಳದಿದ್ದರೆ ಬಾಂಬ್ ಸ್ಫೋಟಿಸಿ ಹತ್ಯೆ ಮಾಡುವುದಾಗಿ ನಿತೀಶ್ ಕುಮಾರ್ ​ಗೆ ಬೆದರಿಕೆ ಹಾಕಿದ್ದ.

ಆರೋಪಿಯು ಜನವರಿ 30 ರಂದು ಬಿಹಾರದ ಪೊಲೀಸ್ ಮಹಾನಿರ್ದೇಶಕ ಆರ್‌ ಎಸ್ ಭಟ್ಟಿ ಅವರಿಗೆ ವಾಟ್ಸಾಪ್ ಸಂದೇಶ ಮತ್ತು ಆಡಿಯೊ ಕ್ಲಿಪ್ ಕಳುಹಿಸಿದ್ದ. ಡಿಜಿಪಿಗೆ ಕಳುಹಿಸಿದ ಸಂದೇಶ ಮತ್ತು ಆಡಿಯೊ ಕ್ಲಿಪ್‌ ನಲ್ಲಿ, ‘ಬಿಜೆಪಿಯಿಂದ ಬೇರ್ಪಡದಿದ್ದರೆ ಸಿಎಂ ನಿತೀಶ್ ಕುಮಾರ್ ಮತ್ತು ಇತರ ಶಾಸಕರನ್ನು ಬಾಂಬ್ ಸ್ಫೋಟಿಸಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಬಿಹಾರ ಪೊಲೀಸರು ಈ ಬಗ್ಗೆ ತಕ್ಷಣವೇ ತನಿಖೆ ಆರಂಭಿಸಿದ್ದು, ಆರೋಪಿಯ ಪತ್ತೆಗೆ ಬಲೆಬೀಸಿದ್ದರು.

ಡಿಜಿಪಿಗೆ ಸಂದೇಶ ಬಂದಿದ್ದ ಮೊಬೈಲ್ ಸಂಖ್ಯೆಯ (8431233508) ಮೂಲ ಪರಿಶೀಲಿಸಿದಾಗ ಆ ಸ್ಥಳ ಕರ್ನಾಟಕದ ದಾವಣಗೆರೆ ಎಂಬದು ತಿಳಿದುಬಂದಿದೆ. ಆರೋಪಿಗಳ ಪತ್ತೆಗೆ ಬಿಹಾರ ಪೊಲೀಸರ ತಂಡ ಕರ್ನಾಟಕಕ್ಕೆ ಬಂದಿತ್ತು. ನಂತರ ಕರ್ನಾಟಕ ಪೊಲೀಸರ ಸಹಾಯದಿಂದ ಆರೋಪಿಯನ್ನು ದಾವಣಗೆರೆಯಲ್ಲಿ ಬಂಧಿಸಲಾಗಿದೆ. ಆರೋಪಿಯು ದಾವಣಗೆರೆಯ ಬಿಎನ್‌ಎಂ ಹೈಟೆಕ್ ಆಗ್ರೋ ಇಂಡಸ್ಟ್ರೀಸ್ ರೈಸ್ ಮಿಲ್‌ನಲ್ಲಿ ಗೋಣಿಚೀಲ ಹೊಲಿಗೆ ಕೆಲಸ ಮಾಡುತ್ತಿದ್ದ.

ಬಿಹಾರದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಬಡತನಕ್ಕೆ ಅಲ್ಲಿನ ಸರ್ಕಾರವೇ ಹೊಣೆ ಎಂದು ವಿಚಾರಣೆ ವೇಳೆ ಆತ ದೂರಿದ್ದಾನೆ. ಆರೋಪಿಯ ಕುಟುಂಬದವರು ಹಸನ್‌ ಪುರದ (ಸಮಸ್ತಿಪುರ) ದಯಾನಗರದಲ್ಲಿ ವಾಸಿಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular