Monday, April 21, 2025
Google search engine

Homeರಾಜ್ಯನಟ ದರ್ಶನ್ ಬಂಧನ: ತನಿಖೆ ಆಗುವವರೆಗೂ ಏನೂ ಹೇಳಲು ಆಗುವುದಿಲ್ಲ- ಜಿ. ಪರಮೇಶ್ವರ

ನಟ ದರ್ಶನ್ ಬಂಧನ: ತನಿಖೆ ಆಗುವವರೆಗೂ ಏನೂ ಹೇಳಲು ಆಗುವುದಿಲ್ಲ- ಜಿ. ಪರಮೇಶ್ವರ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಎಂಬ ಮಾಹಿತಿ ಇದೆ. ಅದರ ಮೇಲೆ ತನಿಖೆ ಆಗುವವರೆಗೂ ಏನೂ ಹೇಳಲು ಆಗುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಈ ಪ್ರಕರಣದಲ್ಲಿ ದರ್ಶನ್ ನೇರವಾಗಿ ಭಾಗಿಯಾಗಿದ್ದಾರೆಯೇ? ಇಲ್ಲವೇ? ಯಾವ ಕಾರಣಕ್ಕೆ ಕೊಲೆ ಆಗಿದೆ. ದರ್ಶನ್ ಹೆಸರು ಯಾಕೆ ಬಂದಿದೆ ಎನ್ನುವುದು ತನಿಖೆ ನಂತರ ಗೊತ್ತಾಗಲಿದೆ. ಸದ್ಯ ಬೇರೆ ಏನು ಹೇಳಲು ಸಾಧ್ಯವಿಲ್ಲ. ತನಿಖೆ ಆದಮೇಲೆ ಎಲ್ಲವೂ ಗೊತ್ತಾಗಲಿದೆ. ಅದಕ್ಕೂ ಮೊದಲು ಏನು ಹೇಳಲು ಸಾಧ್ಯವಿಲ್ಲ ಎಂದೂ ಹೇಳಿದರು.

ಸೋಶಿಯಲ್ ಮೀಡಿಯಾ ಕಾಮೆಂಟ್ ಬಗ್ಗೆ ಗೊತ್ತಿಲ್ಲ. ಮೈಸೂರಿನಲ್ಲಿ ಬಂಧನ ಆಗಿದೆ. ಪೊಲೀಸರು ದರ್ಶನ್ ಅವರನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ ಎಂದರು.

RELATED ARTICLES
- Advertisment -
Google search engine

Most Popular