Friday, April 11, 2025
Google search engine

Homeರಾಜ್ಯನಟ ದರ್ಶನ್ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂಗೆ ಮೇಲ್ಮನವಿ: ಸಚಿವ ಪರಮೇಶ್ವರ್

ನಟ ದರ್ಶನ್ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂಗೆ ಮೇಲ್ಮನವಿ: ಸಚಿವ ಪರಮೇಶ್ವರ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ದೊರೆತಿರುವ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ವಿಚಾರವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಮಧ್ಯಂತರ ಜಾಮೀನು ತಡೆ ಕೋರಿ ಮೇಲ್ಮನವಿ ಸಲ್ಲಿಕೆಗೆ ವಿಳಂಬ ಆಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ್, ಮೇಲ್ಮನವಿ ಯಾವಾಗ ಸಲ್ಲಿಸಬೇಕು ಎಂಬುದನ್ನು ಗೃಹ ಇಲಾಖೆ ಕಾರ್ಯದರ್ಶಿ ತೀರ್ಮಾನಿಸುತ್ತಾರೆ. ಮೇಲ್ಮನವಿ ಸಲ್ಲಿಸುವುದಾದರೆ ಸಲ್ಲಿಸಿ ಎಂದು ನಾನೂ ಸೂಚಿಸಿದ್ದೇನೆ. ಇಂಥ ಪ್ರಕರಣಗಳಲ್ಲಿ ಪ್ರಕ್ರಿಯೆಗಳನ್ನು ಅನುಸರಿಸಿ ಮುಂದುವರಿಯಬೇಕಾಗುತ್ತದೆ ಎಂದರು.

ಮೇಲ್ಮನವಿ ಸಲ್ಲಿಕೆ ವಿಚಾರವಾಗಿ ಕಾನೂನು ಇಲಾಖೆಯಿಂದಲೂ ಮಾಹಿತಿ ತೆಗೆದುಕೊಳ್ಳಬೇಕು. ಪೊಲೀಸ್ ಇಲಾಖೆಯಿಂದಲೂ ಕೂಡ ಪ್ರಸ್ತಾವನೆ ಬರಬೇಕು. ನಂತರವೇ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಪರಮೇಶ್ವರ್ ಹೇಳಿದರು.

RELATED ARTICLES
- Advertisment -
Google search engine

Most Popular