Wednesday, April 23, 2025
Google search engine

Homeರಾಜ್ಯನಟ ಕೆ ಶಿವರಾಮ್ ಅವರಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ನಟ ಕೆ ಶಿವರಾಮ್ ಅವರಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ನಟ ಕೆ ಶಿವರಾಮ್ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಎಚ್ ​ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವರಾಮ್ ಅವರ ಅಳಿಯ ಭರತ್ ನೀಡಿರುವ ಮಾಹಿತಿಯಂತೆ, 20 ದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಆರೋಗ್ಯ ಚಿಂತಾಜನಕ ಆಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರಿಗೆ ಡಯಾಲಿಸಿಸ್ ನೀಡಲಾಗುತ್ತಿದೆ. ಶಿವರಾಮ್ ಅವರು ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದಾರೆ ಎಂದಿದ್ದಾರೆ.

ಕೆ ಶಿವರಾಮ್ ಅವರಿಗೆ 71 ವರ್ಷ ವಯಸ್ಸಾಗಿದ್ದು, ಇಂದು (ಫೆಬ್ರವರಿ 28) ಅವರಿಗೆ ಹೃದಯಾಘಾತವಾಗಿದೆ. ಶಿವರಾಮ್ ಅವರ ಮೆದುಳು ನಿಷ್ಕ್ರಿಯವಾಗಿದೆ ಎನ್ನಲಾಗುತ್ತಿದ್ದು, ವೈದ್ಯರು ಅಗತ್ಯ ಚಿಕಿತ್ಸೆ ನೀಡುತ್ತಿದ್ದಾರೆ.

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧು ಚಂದ್ರಕೆ’, ‘ವಸಂತಕಾವ್ಯ’, ‘ಖಳನಾಯಕ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ನಾಗ’, ‘ಓ ಪ್ರೇಮ ದೇವತೆ’, 2007ರಲ್ಲಿ ಬಿಡುಗಡೆ ಆದ ‘ಟೈಗರ್’ ಸಿನಿಮಾಗಳಲ್ಲಿ ನಟಿಸಿದ್ದಾರೆ. 2007 ರ ಬಳಿಕ ಶಿವರಾಮ್ ಅವರು ಯಾವುದೇ ಸಿನಿಮಾಗಳಲ್ಲಿ ನಟಿಸಿರಲಿಲ್ಲ.

ಕೆ ಶಿವರಾಮ್ ಅವರು ಐಎಎಸ್ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ನಿವೃತ್ತರಾದ ಬಳಿಕ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಕೆ ಶಿವರಾಮ್, 2013 ರಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡಿದ್ದರು, ಬಳಿಕ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು, 2016ರ ಬಳಿಕ ಬಿಜೆಪಿ ಪಕ್ಷ ಸೇರಿದ್ದರು. ಇದಲ್ಲದೆ, ಛಲವಾದಿ ಮಹಾಸಭಾದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

RELATED ARTICLES
- Advertisment -
Google search engine

Most Popular