ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಆರೋಪಗಳನ್ನು ಎದುರಿಸುತ್ತಿರುವ ನಟ ದರ್ಶನ್, ಪ್ರಜ್ವಲ್ ರೇವಣ್ಣ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸೂರಜ್ ರೇವಣ್ಣ ವಿರುದ್ಧ ನಟಿ, ಮಾಜಿ ಸಂಸದೆ ರಮ್ಯಾ ಕೆಂಡ ಕಾರಿದ್ದಾರೆ.
ಕಾನೂನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು ಮತ್ತು ಶಕ್ತಿಶಾಲಿಗಳು. ಅವರ ಹಿಂಸಾತ್ಮಕ ಕ್ರಿಯೆಯಿಂದಾಗಿ ಬಡವರು, ಮಹಿಳೆಯರು ಮತ್ತು ಮಕ್ಕಳ ಬದುಕು ನಾಶವಾಗಿದೆ ಎಂದು ಎಕ್ಸ್ನಲ್ಲಿ ಪೋಸ್ಟ್ ಹಾಕಿ ಕಿಡಿಕಾರಿದ್ದಾರೆ.