ಮಂಡ್ಯ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಮಾಡಿರುವ ಮಂಡ್ಯ ಜಿಲ್ಲೆಯ 7 ಸಹಾಯಕ ಕೃಷಿ ನಿರ್ದೇಶಕರು ಹಾಗೂ ಸಿಬ್ಬಂದಿ ರಾಜಭವನಕ್ಕೆ ದೂರು ಸಲ್ಲಿಸಿದ್ದಾರೆ.
6 ರಿಂದ 8 ಲಕ್ಷ ರೂ. ಕೊಡುವಂತೆ ಚಲುವರಾಯಸ್ವಾಮಿ ಮೇಲಾಧಿಕಾರಿಗಳ ಮೂಲಕ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಅಧಿಕಾರಿಗಳು ರಾಜಭವನಕ್ಕೆ ದೂರು ಅರ್ಜಿ ಸಲ್ಲಿಸಲಾಗಿದೆ.

ಲಂಚದ ಅನಿಷ್ಟ ಪದ್ದತಿಗೆ ಕಡಿವಾಣ ಹಾಕದಿದ್ದರೆ ಅಧಿಕಾರಿಗಳು ಕುಟುಂಬ ಸಮೇತ ವಿಷಕುಡಿಯುವುದಾಗಿ ದೂರಿನಲ್ಲಿ ಎಚ್ಚರಿಕೆ ನೀಡಿದ್ದಾರೆ.
ರಾಜ್ಯಪಾಲರ ಅಧೀನ ಕಾರ್ಯದರ್ಶಿಯಿಂದ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಈ ಕುರಿತು ಪತ್ರ ಬರೆಯಲಾಗಿದೆ. ಈ ಪತ್ರದ ಬಗ್ಗೆ ಕ್ರಮವಹಿಸುವಂತೆ ಮುಖ್ಯಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ.
ಈಗ ಸರ್ಕಾರ ಕೃಷಿ ಸಚಿವರ ವಿರುದ್ಧ ತನಿಖೆ ನಡೆಸುತ್ತಾ? ಸರ್ಕಾರ ಏನು ಕ್ರಮಕೈಗೊಳ್ಳಲಿದೆ? ಎಂಬುದನ್ನು ಕಾದು ನೋಡಬೇಕಿದೆ.