Wednesday, April 16, 2025
Google search engine

Homeಅಪರಾಧವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು ಆರೋಪ: ಪರಿಹಾರಕ್ಕೆ ಒತ್ತಾಯಿಸಿ ಸಂಬಂಧಿಕರ ಧರಣಿ

ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು ಆರೋಪ: ಪರಿಹಾರಕ್ಕೆ ಒತ್ತಾಯಿಸಿ ಸಂಬಂಧಿಕರ ಧರಣಿ

ಮಂಡ್ಯ: ಬಿಜಿಎಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಬಳಿಯ ಆಸ್ಪತ್ರೆ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.

ಬಿಜಿಎಸ್ ಆಸ್ಪತ್ರೆ ವೈದ್ಯರ ವಿರುದ್ದ ಕರ್ತವ್ಯ ಲೋಪ ಆಗಿದೆ ಎಂದು ಮೃತ ರೋಗಿಯ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ 25 ದಿನಗಳ ಹಿಂದೆ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ಹನುಮನಕೊಪ್ಪಲು ಗ್ರಾಮದ ಚಂದ್ರ(40) ಇಂದು ಮೃತಪಟ್ಟಿದ್ದಾರೆ. ಚಂದ್ರ ಸಾವಿಗೆ ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಸ್ಥರು ಆರೋಪಿಸಿದ್ದು, ಚಂದ್ರು ಸಾವಿಗೆ ಪರಿಹಾರ ನೀಡಬೇಕೆಂದು ಸಂಬಂಧಿಕರು ಮತ್ತು ಗ್ರಾಮಸ್ಥರ ಒತ್ತಾಯಿಸಿದ್ದಾರೆ. ಪರಿಹಾರ ಕೊಡದೆ ಶವ ತೆಗೆದುಕೊಂಡು ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಸ್ಥಳಕ್ಕೆ ಬೆಳ್ಳೂರು ಪೊಲೀಸರು ಆಗಮಿಸಿದ್ದು ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular