ಮೈಸೂರು: ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ 141ನೇ ಜಯಂತಿ ಅಂಗವಾಗಿ ಪ್ರಸಿದ್ಧ ರಾಜ ಮನೆತನದ ಶ್ರೀ ನಂಜುಂಡೇಶ್ವರ ದೇವಸ್ಥಾನ ಸಂತೆಪೇಟೆ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಅವರ ಅಭಿಮಾನಿಗಳು ಸಾರ್ವಜನಿಕರು ಸೇರಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಸಂಸದರಾದ
ಯದುವೀರ್ ಒಡೆಯರ್ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿ, ಕಾರ್ಯಕರ್ತರ ಸ್ವಚ್ಛತಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ದಿನೇಶ್ ಗೌಡ, ಮಾಜಿನಗರ ಪಾಲಿಕೆ ಸದಸ್ಯರಾದ ಪ್ರಮೀಳಾ ಭರತ್, ಸುದರ್ಶನ್, ಬಾಬಣ್ಣ, ಶ್ರೀನಿವಾಸ್, ಚರಣ್, ಜನಾರ್ಧನ್, ಅಶೋಕ್, ಪ್ರವೀಣ್, ಪಾಪಣ್ಣ, ವಿನೋದ್ ಮುಂತಾದವರು ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.