Wednesday, April 16, 2025
Google search engine

Homeಅಪರಾಧದಂಡಿನ ಮಾರಮ್ಮ ದೇವಸ್ಥಾನದಲ್ಲಿ ಮತ್ತೆ ಕಳ್ಳತನ: ಹುಂಡಿ ದೋಚಿ ಪರಾರಿಯಾದ ಕಳ್ಳರು

ದಂಡಿನ ಮಾರಮ್ಮ ದೇವಸ್ಥಾನದಲ್ಲಿ ಮತ್ತೆ ಕಳ್ಳತನ: ಹುಂಡಿ ದೋಚಿ ಪರಾರಿಯಾದ ಕಳ್ಳರು

ಮಂಡ್ಯ: ದೇವಸ್ಥಾನದ ಬೀಗ ಒಡೆದ ಖದೀಮರು ಹುಂಡಿ ಹೊತ್ತೊಯ್ದಿದ್ದು, ಹುಂಡಿಯಲ್ಲಿದ್ದ ಹಣ ದೋಚಿ ಹುಂಡಿ ಬಿಸಾಕಿ ಪರಾರಿಯಾಗಿರುವ ಘಟನೆ ಮಳವಳ್ಳಿ ಪಟ್ಟಣದ ಶಕ್ತಿದೇವತೆ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ತಡರಾತ್ರಿ ನಡೆದಿದೆ.

ಒಂದೇ ತಿಂಗಳಲ್ಲಿ ಎರಡೂ ಬಾರಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ.

ಸದರಿ ದೇವಸ್ಥಾನವು ಮಳವಳ್ಳಿಯ- ಬೆಂಗಳೂರು ರಸ್ತೆಯಲ್ಲಿದ್ದು, ತಡರಾತ್ರಿ ದೇವಸ್ಥಾನದ ಬೀಗ ಒಡೆದು ಒಳನುಗ್ಗಿ ಹುಂಡಿ ಹೊತ್ತೊಯ್ದಿರುವ ಖದೀಮರು, ದೇವಸ್ಥಾನದ ಫ್ಯೂಸ್ ಕಿತ್ತು, ದೊಣ್ಣೆಯಲ್ಲಿ ಬಲ್ಪ್ ಗಳನ್ನು ಒಡೆದು ಹಾಕಿ ದೇವಸ್ಥಾನದ ಹುಂಡಿಯಲ್ಲಿದ್ದ ನಗದು ಕಳವು ಮಾಡಲಾಗಿದೆ.

ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಳವಳ್ಳಿ-ಬೆಂಗಳೂರು ಹೆದ್ದಾರಿ ಪಕ್ಕದಲ್ಲೇ ದೇವಸ್ಥಾನ ಇರುವ ಹಿನ್ನಲೆ ಪದೇ ಪದೇ ಕಳ್ಳತನವಾಗುತ್ತಿದ್ದು, ಪೊಲೀಸ್ ಠಾಣೆಯಲ್ಲಿ  ದೂರು ದಾಖಲಿಸಿದ್ದರೂ ಎರಡೂ ಬಾರಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಇದು ಪೊಲೀಸರ ನಿರ್ಲಕ್ಷ್ಯವನ್ನು ಸಾಬೀತು ಮಾಡುತ್ತದೆ.

RELATED ARTICLES
- Advertisment -
Google search engine

Most Popular