Friday, April 18, 2025
Google search engine

Homeಸ್ಥಳೀಯ‘ಅರಿವು’ ಸಾಲ ಯೋಜನೆಗೆ ಅರ್ಜಿ ಆಹ್ವಾನ

‘ಅರಿವು’ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ(ನಿ) ಬೆಂಗಳೂರು ನಗರ ಕೇಂದ್ರೀಯ ವಿಭಾಗ ಇವರಿಂದ  2023-24ನೇ ಸಾಲಿಗೆ ಮತೀಯ  ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ , ಜೈನ್ , ಬೌಧ್ಧ,  ಸಿಖ್ , ಹಾಗೂ ಫಾರ್ಸಿ, ಜನಾಂಗದವರಿಗೆ ಅರಿವು ವಿಧ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ನಿಗಮದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ(ನಿ) ವತಿಯಿಂದ ಅರಿವು ವಿಧ್ಯಾಭ್ಯಾಸ ಯೋಜನೆಯಡಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA, Via/ CET/NEET) ಮುಖಾಂತರ MBBS, BDS, Aayush,  Bachelor Of Arch,  Engineering ,  Bachelor Of Technology Course  Pharmacy , Agriculture Science , Veterinary ಹಾಗೂ Pharma Science  ವ್ಯಾಸಂಗಗಳಿಗೆ ಆಯ್ಕೆಯಾದ ವಿಧ್ಯಾರ್ಥಿಗಳಿಗೆ “ಅರಿವು”ಯೋಜನೆಯಡಿಯಲ್ಲಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್, ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು ನಿಗಮದ ವೆಬ್‍ಸೈಟ್ http://kmdconline.karnataka.gov.in/ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು.

ವಿಧ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಕಂಪ್ಯೊಟರ್‍ನಲ್ಲಿ ಭರ್ತಿ ಮಾಡಿದ ಕೊಡಲೇ ಅರ್ಜಿ ಪ್ರಿಂಟ್‍ಔಟ್ ಪಡೆದು ಕ್ಯೂ.ಆರ್‍ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಎಸ್.ಎಸ್.ಎಲ್.ಸಿ , ಪಿ.ಯು.ಸಿ, ಅಂಕಪಟ್ಟಿ, ಆಧಾರ್‍ಕಾರ್ಡ್ ಫೂಟೋ 05, (Parents and Student) ಸಿ.ಇ..ಟಿ ಹಾಲ್‍ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ 50/-ರಛಾ ಪಾಕಾಗದದಲ್ಲಿ ಇಂಡೆಮ್ನಿಟಿ ಬಾಂಡ್ ಈ ಎಲ್ಲಾ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರು,  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿv(ನಿ)ಬೆಂಗಳೂರು ನಗರ ಕೇಂದ್ರಿಯ ಜಿಲ್ಲೆ ಕೊಠಡಿ ಸಂಖ್ಯೆ FF -29/37, 1ನೇ ಮಹಡಿ, ಹಮೀದ್ ಷಾ ಕಾಂಪ್ಲೆಕ್ ಹಲಸೂರು ಗೇಟ್ ಪೊಲೀಸ್ ಠಾಣೆ ಹತ್ತಿರ, ಕಬ್ಬನ್‍ಪೇಟೆ ಮುಖ್ಯರಸ್ತೆ, ಬೆಂಗಳೂರು-560002 ಈ ಕಛೇರಿಗೆ ಸಲ್ಲಿಸಬಹುದು.  

ಹೆಚ್ಚಿನ ಮಾಹಿತಿ ಪಡೆಯಲು ಈ ಕಛೇರಿಯ ದೂರವಾಣಿಸಂಖ್ಯೆ:  080-22114815ಗೆ ಮತ್ತು ನಮ್ಮ ಹೆಲ್ಪ್‍ಲೈನ್ ಸಂಖ್ಯೆ: 827779990ಗೆ ಸಂಪರ್ಕಿಸಬಹುದಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು  ಕೊನೆಯ ದಿನಾಂಕ 10/07/2023

RELATED ARTICLES
- Advertisment -
Google search engine

Most Popular