Friday, April 11, 2025
Google search engine

Homeಆರೋಗ್ಯನಿಮ್ಮ ಪಾದಗಳು ಬಿರುಕು ಬಿಟ್ಟಿದೆಯೇ? ಇಲ್ಲಿದೆ ಅದಕ್ಕೆ ಸರಳ ಪರಿಹಾರ

ನಿಮ್ಮ ಪಾದಗಳು ಬಿರುಕು ಬಿಟ್ಟಿದೆಯೇ? ಇಲ್ಲಿದೆ ಅದಕ್ಕೆ ಸರಳ ಪರಿಹಾರ

  • ಹಿಮ್ಮಡಿಗಳಿಗೆ ಬೇವಿನ ಎಲೆಗಳನ್ನು ಅರೆದು ಮಾಡಿದ ಲೇಪನ ಮಾಡಿ.
  • ರಾತ್ರಿ ಮಲಗುವ ಮುನ್ನ ಪಾದಗಳಿಗೆ ಹಚ್ಚಿಕೊಳ್ಳಿ
  • ಬಿಳಿ ವಿನೆಗರ್ ಮೃತ ಚರ್ಮವನ್ನು ತೊಡೆದುಹಾಕುತ್ತದೆ.

ಆಯುರ್ವೇದದಲ್ಲಿ ಬಿರುಕುಬಿಟ್ಟ ಹಿಮ್ಮಡಿಗಳಿಗೆ ಬೇವಿನ ಎಲೆಗಳನ್ನು ಅರೆದು ಮಾಡಿದ ಲೇಪನವನ್ನು ಸವರಲು ತಿಳಿಸಲಾಗಿದೆ. ಕೆಲವು ಕಹಿಬೇವಿನ ಎಲೆಗಳನ್ನು ಚೆನ್ನಾಗಿ ತೊಳೆದು ಅರೆಯಿರಿ.

ಕೊಂಚ ನೀರು ಸೇರಿಸಿ ಮದರಂಗಿ ಹಚ್ಚುವಷ್ಟು ದಟ್ಟನೆಯ ಲೇಪನ ತಯಾರಿಸಿಕೊಳ್ಳಿ. ಇದಕ್ಕೆ ಸ್ವಲ್ಪ ಅರಿಶಿನ ಪುಡಿಯನ್ನು ಸೇರಿಸಿ ರಾತ್ರಿ ಮಲಗುವ ಮುನ್ನ ಪಾದಗಳಿಗೆ ಹಚ್ಚಿಕೊಳ್ಳಿ. ಸುಮಾರು ಅರ್ಧಗಂಟೆಯವರೆಗೆ ಒಣಗಲು ಬಿಟ್ಟು ಸ್ವಚ್ಛವಾದ ನೀರಿನಿಂದ ತೊಳೆದುಕೊಳ್ಳಿ.

ಬೇವು ಮತ್ತು ಅರಿಶಿನ ಎರಡೂ ಬ್ಯಾಕ್ಟೀರಿಯಾಗಳ ವಿರುದ್ಧ ಸಮರ್ಥವಾಗಿ ಹೋರಾಡುವ ಶಕ್ತಿ ಪಡೆದಿರುವುದರಿಂದ ಶೀಘ್ರವೇ ಬಿರುಕುಬಿಟ್ಟ ಚರ್ಮ ಆರೋಗ್ಯಕರವಾಗಿ ಕಂಗೊಳಿಸುತ್ತದೆ.

ಅತಿಹೆಚ್ಚು ಬಿರುಕಿದ್ದರೆ ಮಾತ್ರ ದಿನಕ್ಕೆರಡು ಬಾರಿ, ಇಲ್ಲದಿದ್ದರೆ ದಿನಕ್ಕೊಂದು ಬಾರಿ ಮಾತ್ರ ಉಪಯೋಗಿಸಿದರೆ ಸಾಕು. ಮೊಸರಿನ ರೆಸಿಪಿ ತನ್ನ ತೇವಕಾರಕ ಹಾಗೂ ಸೂಕ್ಷ್ಮಾಣುಜೀವಿ ಪ್ರತಿಬ೦ಧಕ ಗುಣಧರ್ಮಗಳ ಕಾರಣದಿ೦ದಾಗಿ ಒಡೆದ ಹಿಮ್ಮಡಿಗಳಿಗೆ ಮನೆಮದ್ದಿನ ರೂಪದಲ್ಲಿ ಮೊಸರು ಚಿರಪರಿಚಿತವಾಗಿದೆ.

ಬಿಳಿ ವಿನೆಗರ್ ನೊ೦ದಿಗೆ ಬೆರೆಸಿದಾಗ, ದ್ರಾವಣವು ಎಲ್ಲಾ ಮೃತ ಚರ್ಮವನ್ನೂ ನಿವಾರಿಸಿಬಿಡುತ್ತದೆ ಹಾಗೂ ಜೊತೆಗೆ ಬಿರುಕುಗಳ ಆಳದಲ್ಲಿ ಸ೦ಚಯಗೊ೦ಡಿರಬಹುದಾದ ಧೂಳುಕೊಳೆಗಳೆಲ್ಲವನ್ನೂ ತೊಡೆದುಹಾಕುತ್ತದೆ.

ಜೇನುತುಪ್ಪವು ಒಡೆದ ಹಿಮ್ಮಡಿಗಳಿಗೆ ತೇವಾ೦ಶವನ್ನು ಪೂರೈಸಿ, ಅವುಗಳ ಸೋ೦ಕುಗಳನ್ನು ನಿವಾರಿಸಿದರೆ, ಬಿಳಿ ವಿನೆಗರ್ ಮೃತ ಚರ್ಮವನ್ನು ತೊಡೆದುಹಾಕುತ್ತದೆ. ಈ ಮಿಶ್ರಣವನ್ನು ನಿಮ್ಮ ಪಾದಗಳಿಗೆ ಮಾಲೀಸು ಮಾಡಿಕೊಳ್ಳಿರಿ ಹಾಗೂ ಬಳಿಕ ಅದನ್ನು ಪಾದಗಳಲ್ಲಿಯೇ ಹಾಗೆಯೇ ಒಣಗಲು ಬಿಡಿರಿ. ಇದಾದ ಬಳಿಕ, ಹಿಮ್ಮಡಿಗಳ ಬಿರುಕುಗಳನ್ನು ಗುಣಪಡಿಸುವ ನಿಟ್ಟಿನಲ್ಲಿ ನಿಮ್ಮ ಪಾದಗಳನ್ನು ಬೆಚ್ಚಗಿನ ನೀರಿನಿ೦ದ ತೊಳೆದುಬಿಡಿರಿ.

ಒಂದು ದೊಡ್ಡ ಬಾಳೆಹಣ್ಣನ್ನು ಕಿವುಚಿ ಎರಡು ಚಮಚ ಆಲಿವ್ ಎಣ್ಣೆಯನ್ನು ಸೇರಿಸಿ. ಈ ಮಿಶ್ರಣವನ್ನು ಪಾದಗಳಿಗೆ ಹಚ್ಚಿ ಸುಮಾರು ಹದಿನೈದು ನಿಮಿಷಗಳವರೆಗೆ ಒಣಗಲು ಬಿಡಿ. ಬಳಿಕ ಸ್ವಚ್ಛವಾದ ನೀರಿನಿಂದ ತೊಳೆದುಕೊಳ್ಳಿ.

ಬಾಳೆಹಣ್ಣು ಚರ್ಮಕ್ಕೆ ಅಗತ್ಯವಾದ ಆರ್ದ್ರತೆಯನ್ನು ನೀಡುವ ಕಾರಣ ಹೊರಚರ್ಮ ಶೀಘ್ರವಾಗಿ ಕಳಚಿಕೊಂಡು ಒಳಚರ್ಮಕ್ಕೆ ಆರೋಗ್ಯಕರವಾಗಿ ಬೆಳೆಯಲು ಅನುಕೂಲವಾಗುತ್ತದೆ. ಸಮಯದ ಆಭಾವವಿರುವವರು ಈ ವಿಧಾನವನ್ನು ಅನುಸರಿಸುವುದು ಒಳ್ಳೆಯದು.

RELATED ARTICLES
- Advertisment -
Google search engine

Most Popular