ಮುಂಬೈ: ಮಾಜಿ ಸಂಸದೆ ಹಾಗೂ ನಟಿ ಜಯಪ್ರದಾ ಅವರನ್ನು ಬಂಧಿಸಿ ಫೆಬ್ರವರಿ ೨೭ ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ರಾಂಪುರ ನ್ಯಾಯಾಲಯ ಆದೇಶ ನೀಡಿದೆ.
ಈ ಹಿಂದಿನ ಕೋರ್ಟ್ ಆದೇಶದಂತೆ ನಟಿ ಜಯಪ್ರದಾ ಅವರನ್ನು ಜನವರಿ ೧೦ರೊಳಗೆ ಬಂಧಿಸಿ ಕೋರ್ಟಿಗೆ ಹಾಜರು ಪಡಿಸಬೇಕಿತ್ತು. ಆದರೆ, ಪೊಲೀಸರ ಕೈಗೆ ಸಿಗದಂತೆ ಜಯಪ್ರದಾ ತಪ್ಪಿಸಿಕೊಳ್ಳುತ್ತಿದ್ದಾರಂತೆ. ಹಾಗಾಗಿ ಕೋರ್ಟ್ ಪೊಲೀಸರಿಗೆ ಎಚ್ಚರಿಕೆ ನೀಡಿದೆ. ಫೆಬ್ರವರಿ ೨೭ರಂದು ಬಂಧಿಸಿ ಕೋರ್ಟಿಗೆ ಹಾಜರು ಪಡಿಸುವಂತೆ ಸೂಚಿಸಿದೆ.
ಜಯಪ್ರದಾ ಅವರನ್ನು ಬಂಧಿಸುವಂತೆ ರಾಂಪುರದ ನ್ಯಾಯಾಲಯವು ಪೊಲೀಸ್ ವರಿಷ್ಠಾಧಿಕಾರಿಗೆ ಆದೇಶ ನೀಡಿದೆ. ವಿಶೇಷ ತಂಡ ರಚಿಸಿ ಮಾಜಿ ಸಂಸದರು, ನಟಿಯೂ ಆಗಿರುವ ಜಯಪ್ರದಾ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಆದೇಶಿಸಲಾಗಿದೆ.
೨೦೧೯ರ ಎರಡು ಪ್ರಕರಣಗಳಲ್ಲಿ ಜಯಪ್ರದಾ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ೨೦೧೯ರ ಲೋಕಸಭೆ ಚುನಾವಣೆಯಲ್ಲಿ ರಾಂಪುರದಿಂದ ಬಿಜೆಪಿ ಟಿಕೆಟ್ನಲ್ಲಿ ಸ್ಪರ್ಧಿಸಿದ್ದರು. ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ನಟಿ ತಲೆಮರೆಸಿಕೊಂಡಿದ್ದಾರೆ.
ವರದಿಯ ಪ್ರಕಾರ, ಹಿರಿಯ ಪ್ರಾಸಿಕ್ಯೂಷನ್ ಅಧಿಕಾರಿ ಅಮರನಾಥ್ ತಿವಾರಿ ಅವರು ಏಳನೇ ಬಾರಿಗೆ ಜಾಮೀನು ರಹಿತ ವಾರೆಂಟ್ ಹೊರಡಿಸಿದ ನಂತರವೂ ಜಯಪ್ರದಾ ನ್ಯಾಯಾಲಯಕ್ಕೆ ವಿಚಾರಣೆಗೆ ಬಂದಿಲ್ಲ ಎಂದು ಹೇಳಿದರು.
ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ನಟಿ ಹಾಗೂ ರಾಜಕಾರಣಿ ಜಯಪ್ರದಾ ತಲೆಮರೆಸಿಕೊಂಡಿದ್ದಾರೆ. ಜಯಪ್ರದಾ ವಿವಾದಕ್ಕೆ ಸಿಲುಕುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಚೆನ್ನೈನ ನ್ಯಾಯಾಲಯವು ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯನ್ನು ತಪ್ಪಿತಸ್ಥರೆಂದು ಘೋಷಿಸಿತು.
ಆಕೆಗೆ ಆರು ತಿಂಗಳ ಜೈಲು ಶಿಕ್ಷೆ ಹಾಗೂ ೫ ಸಾವಿರ ರೂ. ವರದಿಗಳ ಪ್ರಕಾರ, ಜಯಪ್ರದಾ ಅವರ ಥಿಯೇಟರ್ನ ಕಾರ್ಮಿಕರಿಗೆ ಇಎಸ್ಐ ಹಣವನ್ನು ಪಾವತಿಸಿಲ್ಲ ಎಂದು ಆರೋಪಿಸಲಾಗಿದೆ. ನಟಿ ಈ ಆರೋಪವನ್ನು ಒಪ್ಪಿಕೊಂಡರು ಮತ್ತು ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ದೀರ್ಘ ಬಾಕಿಯನ್ನು ತೆರವುಗೊಳಿಸುವುದಾಗಿ ಭರವಸೆ ನೀಡಿದರು. ಆದರೆ, ನ್ಯಾಯಾಲಯ ಆಕೆಯ ಮನವಿಯನ್ನು ತಿರಸ್ಕರಿಸಿ ದಂಡ ಮತ್ತು ಜೈಲು ಶಿಕ್ಷೆ ವಿಧಿಸಿತು.