Tuesday, June 3, 2025
Google search engine

Homeಅಪರಾಧಫೇಸ್‌ಬುಕ್‌ನಲ್ಲಿ ಕೋಮುಸೌಹಾರ್ದ ಧ್ವಂಸಕ್ಕೆ ಯತ್ನ: ಯುವಕನ ವಿರುದ್ಧ ವಿಟ್ಲದಲ್ಲಿ ಪ್ರಕರಣ ದಾಖಲು

ಫೇಸ್‌ಬುಕ್‌ನಲ್ಲಿ ಕೋಮುಸೌಹಾರ್ದ ಧ್ವಂಸಕ್ಕೆ ಯತ್ನ: ಯುವಕನ ವಿರುದ್ಧ ವಿಟ್ಲದಲ್ಲಿ ಪ್ರಕರಣ ದಾಖಲು

ಮಂಗಳೂರು (ದಕ್ಷಿಣ ಕನ್ನಡ) ಫೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆಯನ್ನುಂಟು ಮಾಡುವ ಪೋಸ್ಟ್ ಗಳನ್ನು ಹಾಕಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನು ʻಯತೀಶ್ ಪೆರುವಾಯಿʼ ಎಂಬ ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆಯನ್ನುಂಟು ಮಾಡುವ ರೀತಿಯ 3 ಪೋಸ್ಟ್ ಗಳನ್ನು ಹಾಕಿದ್ದು, ಅವನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವಿಟ್ಲ ಠಾಣಾ ಪೊಲೀಸರು ತಿಳಿಸಿದ್ದಾರೆ.


ಇಂತಹ ಪೋಸ್ಟ್ ಗಳಿಂದಾಗಿ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಅ.ಕ್ರ: 72/2025 ಕಲಂ: 353(2) BNS 2023ರಂತೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular