Friday, April 11, 2025
Google search engine

Homeರಾಜ್ಯವಕ್ಫ್ ವಿವಾದ ಹಿನ್ನೆಲೆ ಸಚಿವ ಜಮೀರ್ ಅಹ್ಮದ್ ಕಚೇರಿಗೆ ಮುತ್ತಿಗೆ ಯತ್ನ : ಪ್ರಮೋದ್ ಮುತಾಲಿಕ್...

ವಕ್ಫ್ ವಿವಾದ ಹಿನ್ನೆಲೆ ಸಚಿವ ಜಮೀರ್ ಅಹ್ಮದ್ ಕಚೇರಿಗೆ ಮುತ್ತಿಗೆ ಯತ್ನ : ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ

ಬೆಂಗಳೂರು : ವಕ್ಫ್ ವಿವಾದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಕಚೇರಿಗೆ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಇಂದು ವಕ್ಫ್ ವಿರುದ್ಧ ಶ್ರೀರಾಮ ಸೇನೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಗೂ ಮುನ್ನ ಚಾಮರಾಜಪೇಟೆಯ ಮಹದೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಲಾಯಿತು. ಪೂಜೆಯ ಬಳಿಕ ಶಾಸಕ ಜಮೀರ್ ಕಚೇರಿಯ ವರೆಗೂ ಶ್ರೀಮರಾಮ ಸೇನೆ ಪಾದಯಾತ್ರೆ ನಡೆಸಿತು. ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಪುತಾಲಿಕ್ ನೇತೃತ್ವದಲ್ಲಿ ರ್‍ಯಾಲಿ ನಡೆಯಿತು.

ಈ ವೇಳೆ ಸಚಿವ ಜಮೀರ್ ಅಹ್ಮದ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಮುತಾಲಿಕ್ ಗೆ ತಡೆ ಒಡ್ಡಲಾಯಿತು. ರ್‍ಯಾಲಿ ಬೇಡ ವಾಹನದಲ್ಲಿ ತೆರಳಿ ಮನವಿಪತ್ರ ಸಲ್ಲಿಸುವಂತೆ ಈ ವೇಳೆ ಪೊಲೀಸರು ಸೂಚನೆ ನೀಡಿದರು. ಮನವೊಲಿಕೆಗೆ ಒಪ್ಪದ ಹಿನ್ನೆಲೆಯಲ್ಲಿ ಪೊಲೀಸರು ಮುತಾಲಿಕ್ ಅವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular