ಬೆಳಗಾವಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಧಾರಾಕಾರ ಮಳೆ ಕಾರಣದಿಂದ ಹಲವೆಡೆ ಪರಿಸ್ಥಿತಿ ಭಯಾನಕವಾಗಿದೆ. ಈ ಮಧ್ಯೆ, ಯರಗಟ್ಟಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ.
ಮಳೆಯ ರಭಸದಿಂದ ಹಳ್ಳ ತುಂಬಿ ಹರಿಯುತ್ತಿದ್ದಾಗ ಆ ಹಳ್ಳ ದಾಟುತ್ತಿದ್ದ ಆಟೋವೊಂದು ನೀರಿನ ಪ್ರವಾಹಕ್ಕೆ ಕೊಚ್ಚಿಕೊಂಡು ಹೋಗಿದ್ದು, ಆಟೋ ಚಾಲಕನ ಮೃತದೇಹಕ್ಕಾಗಿ ಗ್ರಾಮಸ್ಥರು ಹಾಗೂ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.