Saturday, April 19, 2025
Google search engine

Homeರಾಜ್ಯಸುದ್ದಿಜಾಲಮಾನಸಿಕ ಒತ್ತಡಕ್ಕೆ ತಜ್ಞರಿಂದ ಅರಿವು ಮುಖ್ಯ

ಮಾನಸಿಕ ಒತ್ತಡಕ್ಕೆ ತಜ್ಞರಿಂದ ಅರಿವು ಮುಖ್ಯ

ಧಾರವಾಡ : ಸಿಬ್ಬಂದಿಗಳು ಒತ್ತಡ ಸಹಿಸಲಾಗದೆ ಕೆಲವರು ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಅಂತಹ ನಿರ್ಧಾರಗಳಿಂದ ಹೊರಬರುವಂತೆ ಮಾನಸಿಕ ತಜ್ಞರು ತಿಳುವಳಿಕೆ ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ ಅವರು ಹೇಳಿದರು. ಅವರು ಇಂದು (ಡಿ.14) ಬೆಳಿಗ್ಗೆ ನಗರದ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಜರುಗಿದ ಮಾನಸಿಕ ಒತ್ತಡ ನಿವಾರಣೆಯ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ತಜ್ಞ ವೈದ್ಯರುಗಳಿಂದ ಅವಸರದ ನಿರ್ಧಾರ ತಡೆಗಟ್ಟುವ ನಿಟ್ಟಿನಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಕೆಲವೊಂದು ಅಹಿತಕರ ಘಟನೆಗಳನ್ನು ತಡೆಯಬೇಕಿದೆ. ಸಿಬ್ಬಂದಿಗಳು ಮಾನಸಿಕ ಒತ್ತಡದಿಂದ ತೆಗೆದುಕೊಳ್ಳುತ್ತಿರುವ ಆತುರದ ನಿರ್ಧಾರದಿಂದ ಜೀವವನ್ನೇ ಕಳೆದುಕೊಳ್ಳುತ್ತಾರೆ. ಅಂತಹ ಸಿಬ್ಬಂದಿಗಳನ್ನು ಗುರುತಿಸಿ ಚಿಕಿತ್ಸೆ ಕೊಡಿಸಬೇಕೆಂದರು. ಕೆಲಸದ ನಿಮಿತ್ಯ ಮಾನಸಿಕ ಒತ್ತಡವು ಹೆಚ್ಚಿದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ. ದೂರವಾಣಿ ಸಂಖ್ಯೆಗೆ ಕರೆ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೆಕೆಂದು ಅವರು ತಿಳಿಸಿದರು.

ಡಿಮಾನ್ಸ್ ಮಾನಸಿಕ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಮೇಘಮಾಲಾ ಎಸ್ ತಾವರಗಿ ಅವರು ತರಬೇತಿ ಕುರಿತಾಗಿ ಕೆಲಸದ ಸ್ಥಳಗಳಲ್ಲಿ ಒತ್ತಡ ನಿರ್ವಹಣೆ ಹಾಗೂ ಕೌಟುಂಬಿಕ ಕಲಹಗಳು ನಿರ್ವಹಣೆ ಎಲ್ಲ ವಿಷಯಗಳ ಕುರಿತಾಗಿ ಸವಿಸ್ತಾರವಾಗಿ ಮಾತನಾಡಿದರು. ವಿವಿಧ ರೀತಿಯ ಒತ್ತಡಗಳು. ಸಮಸ್ಯೆ ಆಧಾರಿತ ಒತ್ತಡಗಳು, ಒತ್ತಡಗಳಿಂದ ಆರೋಗ್ಯದ ಮೇಲೆ ಆಗುವಂತ ಸಮಸ್ಯೆಗಳು, ಕೆಲಸದ ಒತ್ತಡಗಳನ್ನು ಹೇಗೆ ನಿರ್ವಹಣೆ ಮಾಡಬೇಕು. ಕುಟುಂಬ ನಿರ್ವಹಣೆ ಮಾಡುವಾಗ ಬರುವಂತಹ ಸಮಸ್ಯೆಗಳು ಹೇಗೆ ನಿಭಾಯಿಸಬೇಕು ಮತ್ತು ಪರಿಹರಿಸಿಕೊಳ್ಳಬೇಕು ಹಾಗೂ ಕುಟುಂಬದೊಂದಿಗೆ ಕಳೆಯುವಂತಹ ಸಮಯ ಮೌಲ್ಯವಾಗಿರಬೇಕು ಮತ್ತು ಆರೋಗ್ಯಕರವಾಗಿರುವಂತಹ ವಾತಾವರಣವನ್ನು ಸೃಷ್ಟಿ ಮಾಡಿಕೊಳ್ಳುವ ಕುರಿತು ಹಾಗೂ ಕುಟುಂಬದ ಸದಸ್ಯರೊಂದಿಗೆ ಸಮಸ್ಯೆಗಳನ್ನು ಹಂಚಿಕೊಳ್ಳುವ ಕುರಿತು ಸವಿಸ್ತಾರವಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಶಶಿ.ಪಾಟೀಲ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಸವಲಿಂಗಯ್ಯ ಮೂಗನೂರಮಠ, ಜಿಲ್ಲಾ ಕುಷ್ಠರೋಗ ನಿಯಂತ್ರಣಧಿಕಾರಿ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಡಾ.ಎಸ್.ಬಿ.ಕಳಸೂರಮಠ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ವಕೀಲರಾದ ಸೋಮಶೇಖರ ಜಾಡರ, ಪೆÇಲೀಸ್ ಇಲಾಖೆಯ ಡಿವೈಎಸ್ಪಿ ನಾಗರಾಜ ಎಸ್.ಎಂ., ಅವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular