Thursday, July 3, 2025
Google search engine

Homeರಾಜ್ಯಶಾಲಾ ಸಮಯದಲ್ಲಿ ಶಿಕ್ಷಕರು, ಮುಖ್ಯೋಪಾಧ್ಯಾಯರಿಗೆ ಬೇರೆ ಕಾರ್ಯಗಳಿಗೆ ನಿಯೋಜನೆ ನಿಷೇಧ: ಶಿಕ್ಷಣ ಇಲಾಖೆಯ ಸುತ್ತೋಲೆ

ಶಾಲಾ ಸಮಯದಲ್ಲಿ ಶಿಕ್ಷಕರು, ಮುಖ್ಯೋಪಾಧ್ಯಾಯರಿಗೆ ಬೇರೆ ಕಾರ್ಯಗಳಿಗೆ ನಿಯೋಜನೆ ನಿಷೇಧ: ಶಿಕ್ಷಣ ಇಲಾಖೆಯ ಸುತ್ತೋಲೆ

ಬೆಂಗಳೂರು: ಸರ್ಕಾರಿ ಶಾಲೆಗಳ ಶಿಕ್ಷಕರು ಮತ್ತು ಶಾಲಾ ಮುಖ್ಯೋಪಾಧ್ಯಾಯರನ್ನು ಯಾವುದೇ ತರಬೇತಿ, ಕಾರ್ಯಾಗಾರ, ಸಭೆ, ಅಥವಾ ಇತರ ಚಟುವಟಿಕೆಗಳಿಗಾಗಿ ಶಾಲಾ ಸಮಯದಲ್ಲಿ ನಿಯೋಜನೆ ಮಾಡಬಾರದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೊಸ ಸುತ್ತೋಲೆ ಹೊರಡಿಸಿದೆ. ಸರ್ಕಾರದ ಪ್ರಧಾನ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಅವರು ಈ ಬಗ್ಗೆ ಸ್ಪಷ್ಟ ಸೂಚನೆಗಳನ್ನು ನೀಡಿದ್ದಾರೆ.

ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಶಾಲೆಯ ಸಮಯದಲ್ಲಿ ಶಾಲೆಯಲ್ಲಿಯೇ ಹಾಜರಿದ್ದು, ಶಿಕ್ಷಣದ ಹಕ್ಕು ಕಾಯಿದೆಯ ಅಡಿಯಲ್ಲಿ ಶಿಕ್ಷಾ ಕ್ರಿಯೆಗಳು ನಿರಂತರವಾಗಿ ನಡೆಯಬೇಕು ಎಂಬುದನ್ನು ಈ ಸೂಚನೆ ಪ್ರಾಮುಖ್ಯತೆಯಿಂದ ತಿಳಿಸುತ್ತದೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕರು ಯಾವುದೇ ರೀತಿಯ ಸಭೆ ಅಥವಾ ವೀಡಿಯೋ ಕಾನ್ಫರೆನ್ಸ್‌ಗೆ ಶಿಕ್ಷಕರನ್ನು ಕರೆಯಬಾರದು.

ಶಾಲೆಗೆ ಭೇಟಿ ನೀಡುವ ಅಧಿಕಾರಿಗಳು ತರಗತಿಗಳಿಗೆ ಅಡ್ಡಿಯಾಗದ ರೀತಿಯಲ್ಲಿ ನಡೆದುಕೊಳ್ಳಬೇಕು. ವಿದ್ಯಾರ್ಥಿಗಳನ್ನು ಬೇರೆ ಕಾರ್ಯಕ್ರಮಗಳಿಗೆ ಪ್ರೇಕ್ಷಕರಾಗಿ ಕರೆದೊಯ್ಯುವುದನ್ನು ಕೂಡ ನಿಷೇಧಿಸಲಾಗಿದೆ. ಶಾಲಾ ಆವರಣದಲ್ಲಿ ಬೇರೆ ಯಾವುದೇ ಬಾಹ್ಯ ಪರೀಕ್ಷೆಗಳನ್ನು (ಕೆಪಿಎಸ್‌ಸಿ ಅಥವಾ ಇತರ) ಶಾಲಾ ದಿನಗಳಲ್ಲಿ ನಡೆಸುವುದನ್ನು ಕೂಡ ನಿಷೇಧಿಸಲಾಗಿದೆ.

ಖಾಸಗಿ ಸಂಸ್ಥೆಗಳ ಸಾಫ್ಟ್‌ವೇರ್‌ಗಳಲ್ಲಿ ಡೇಟಾ ಎಂಟ್ರಿಗೆ ಶಿಕ್ಷಕರನ್ನು ನಿಯೋಜಿಸುವುದೂ ತಪ್ಪು ಎಂದು ಎಚ್ಚರಿಸಲಾಗಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಸಂಪೂರ್ಣವಾಗಿ ಶಾಲೆಯಲ್ಲಿ ಹಾಜರಾಗಬೇಕು ಎಂಬುದು ಈ ಸುತ್ತೋಲೆಯ ಮುಖ್ಯ ಉದ್ದೇಶವಾಗಿದೆ.

RELATED ARTICLES
- Advertisment -
Google search engine

Most Popular