Monday, April 14, 2025
Google search engine

Homeರಾಜ್ಯಬಾಣಂತಿಯರ ಸಾವು ಪ್ರಕರಣ : ಬಿಮ್ಸ್​ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ

ಬಾಣಂತಿಯರ ಸಾವು ಪ್ರಕರಣ : ಬಿಮ್ಸ್​ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ : ಬಳ್ಳಾರಿಯ ಜಿಲ್ಲಾ ಆಸ್ಪತ್ರೆ(ಬಿಮ್ಸ್‌)ಯಲ್ಲಿ ಬಾಣಂತಿಯರು ಹಾಗೂ ಶಿಶುಗಳ ಮರಣ ಪ್ರಕರಣಗಳ ಸಂಬಂಧ ಬಿಮ್ಸ್‌ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಲೋಕಾಯುಕ್ತ ಎಸ್​ಪಿ ಸಿದ್ದರಾಜು ನೇತೃತ್ವದಲ್ಲಿ 25 ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳ ತಂಡ ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯ ಹೆರಿಗೆ ವಾರ್ಡ್​, ಐಸಿಯು, ಔಷಧಿ ದಾಸ್ತಾನು ಉಗ್ರಾಣದಲ್ಲಿ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ಬಿಮ್ಸ್​​ ಆಸ್ಪತ್ರೆಯಲ್ಲಿ ಒಂದು ತಿಂಗಳ ಅಂತರದಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದರು. ಈ ಸಂಬಂಧ ಬಿಜೆಪಿಯ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಶಾಸಕ ಸಿ.ಕೆ.ರಾಮಮೂರ್ತಿ ಮತ್ತು ಎಂಎಲ್​​ಸಿ ರವಿಕುಮಾರ್​ ಒಳಗೊಂಡ ನಿಯೋಗ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ, ಬಾಣಂತಿಯರ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿತ್ತು.

RELATED ARTICLES
- Advertisment -
Google search engine

Most Popular