Friday, April 11, 2025
Google search engine

Homeರಾಜ್ಯಬಂಡೆಯೇ ಸಿಎಂ ಸಿದ್ದರಾಮಯ್ಯಗೆ ಪ್ರಾಬ್ಲಂ : ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಬಂಡೆಯೇ ಸಿಎಂ ಸಿದ್ದರಾಮಯ್ಯಗೆ ಪ್ರಾಬ್ಲಂ : ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಮೈಸೂರು: ಸಿದ್ದರಾಮಯ್ಯನ ಹಿಂದೆ ಬಂಡೆ ಇದೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಈ ಬಂಡೆಯೇ ಸಿಎಂ ಸಿದ್ದರಾಮಯ್ಯಗೆ ಪ್ರಾಬ್ಲಂ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಆಯೋಜಿಸಿರುವ ಪಾದಯಾತ್ರೆಯ ಕೊನೆಯ ದಿನವಾದ ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ಡಿಕೆಶಿ ಅವರು ಮುಖವಾಡ ಹಾಕಿ ಒಳಗೊಂದು ಹೊರಗೊಂದು ಮಾತನಾಡುತ್ತಿದ್ದಾರೆ. ಈಗಾಗಲೇ ಬಂಡೆ ಸಿಎಂ ಕುರ್ಚಿಗೆ ಟವೆಲ್ ಹಾಕಿಕೊಂಡು ಕುಳಿತಿದೆ. ಬಂಡೆ ಯಾವಾಗ ಬೇಕಾದರೂ ಸಿದ್ದರಾಮಯ್ಯ ಮೇಲೆ ಬೀಳಬಹುದು ಎಂದು ನಿಖಿಲ್ ಡಿಕೆಶಿಗೆ ಟಾಂಗ್ ನೀಡಿದ್ದಾರೆ.

ಸಿದ್ದರಾಮಯ್ಯ ಜನತಾ ಪರಿವಾರದಲ್ಲಿದ್ದಾಗ ಏನು ಮಾತನಾಡಿದ್ದರು ಎಂದು ತಿಳಿದಿದೆ. ಸೋನಿಯಾ ಗಾಂಧಿ ಬಗ್ಗೆ ಏನೇನು ಮಾತನಾಡಿದ್ದಾರೆ ಎಲ್ಲಾ ತಿಳಿದಿದೆ. ಮಲ್ಲಿಕಾರ್ಜುನ ಖರ್ಗೆಯವರನ್ನು ರಾಜ್ಯದಿಂದ ಕೇಂದ್ರಕ್ಕೆ ಓಡಿಸಿದ್ದು ಯಾರು? ಜಿ ಪರಮೇಶ್ವರ್‌ರನ್ನು ಸೋಲಿಸಿದ್ದು ಯಾರು ಎಲ್ಲವೂ ತಿಳಿದಿದೆ ನಮಗೆ ತಿಳಿದಿದೆ ಎಂದರು.

RELATED ARTICLES
- Advertisment -
Google search engine

Most Popular