Friday, April 18, 2025
Google search engine

Homeಅಪರಾಧತುಮಕೂರಿನಲ್ಲಿ ಹುಡುಗಿ ವಿಚಾರಕ್ಕೆ ಯುವಕನ ಬರ್ಬರ ಮರ್ಡರ್

ತುಮಕೂರಿನಲ್ಲಿ ಹುಡುಗಿ ವಿಚಾರಕ್ಕೆ ಯುವಕನ ಬರ್ಬರ ಮರ್ಡರ್

ತುಮಕೂರು: ತುಮಕೂರಿನಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದು, ಹುಡುಗಿ ವಿಚಾರಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ತುಮಕೂರಿನ ಮರಳೂರು ದಿಣ್ಣೆಯಲ್ಲಿ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಲಾಗಿದೆ. ಮನೆಯಲ್ಲಿ ಊಟ ಮಾಡುತ್ತಿದ್ದವನನ್ನು ಕರೆಸಿಕೊಂಡು ಕೊಲೆ ಮಾಡಿದ್ದಾರೆ. ಹುಡುಗಿಯ ವಿಚಾರಕ್ಕೆ 20 ವರ್ಷದ ರಿಹಾನ್ ಪಾಷಾನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಮಾತನಾಡಬೇಕಿದೆ ಬಾ ಎಂದು ಕರೆಸಿಕೊಂಡು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಮರಳೂರು ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದರೂ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತುಮಕೂರಿನ ತಿಲಕ್ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES
- Advertisment -
Google search engine

Most Popular