Thursday, April 17, 2025
Google search engine

Homeಅಪರಾಧಬೆಳಗಾವಿ: ಮೂವರು ದುಷ್ಕರ್ಮಿಗಳಿಂದ ನಡುರಸ್ತೆಯಲ್ಲೇ ಯುವಕನ ಕೊಲೆ

ಬೆಳಗಾವಿ: ಮೂವರು ದುಷ್ಕರ್ಮಿಗಳಿಂದ ನಡುರಸ್ತೆಯಲ್ಲೇ ಯುವಕನ ಕೊಲೆ

ಬೆಳಗಾವಿ: ಯುವಕನನ್ನು ಮೂವರು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಶಿವಬಸವನಗರದಲ್ಲಿ ನಡೆದಿದೆ.

ರಾಮನಗರ ನಿವಾಸಿ ನಾಗರಾಜ್ ಗಾಡಿವಡ್ಡರ್ (26) ಮೃತ ಯುವಕ.

ನಿನ್ನೆ ತಡರಾತ್ರಿ ಶಿವಬಸವನಗರದಲ್ಲಿ ಹೋಗುತ್ತಿದ್ದ ನಾಗರಾಜ್ ಗಾಡಿವಡ್ಡರ್ ನನ್ನು ಬೈಕ್​ ನಲ್ಲಿ ಹಿಂಬಾಲಿಸಿಕೊಂಡ ಬಂದ ಮೂವರು ದುಷ್ಕರ್ಮಿಗಳು ಅಡ್ಡಹಾಕಿ ಕಲ್ಲಿನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಬಳಿಕ ಮೂವರು ಆರೋಪಿಗಳು ಒಂದೊಂದು ದಿಕ್ಕಿಗೆ ಪರಾರಿಯಾಗಿದ್ದಾರೆ.

ಘಟನೆ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಘಟನೆ ಸಂಬಂಧ ಮಾಹಿತಿ ತಿಳಿದ ಡಿಸಿಪಿ ಶೇಖರ್, ಎಸಿಪಿ ಕಟ್ಟಿಮನಿ ಭೇಟಿನೀಡಿ ಪರಿಶೀಲನೆ ನಡೆಸಿದ್ದು, ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಆಗಮಿಸಿದ ಶ್ವಾನ ದಳ, ಬೆರಳಚ್ಚು ತಜ್ಞರು ಮಾಹಿತಿ ಸಂಗ್ರಹ ಮಾಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

RELATED ARTICLES
- Advertisment -
Google search engine

Most Popular