Monday, June 23, 2025
Google search engine

Homeಅಪರಾಧಬೆಂಗಳೂರು: ಹಿಟ್ ಅಂಡ್ ರನ್ ಕೇಸ್, ಟೆಕ್ಕಿ ಸ್ಥಳದಲ್ಲೇ ದುರ್ಮರಣ!

ಬೆಂಗಳೂರು: ಹಿಟ್ ಅಂಡ್ ರನ್ ಕೇಸ್, ಟೆಕ್ಕಿ ಸ್ಥಳದಲ್ಲೇ ದುರ್ಮರಣ!

ಬೆಂಗಳೂರು: ನಗರದ ರಸ್ತೆಗಳಲ್ಲಿ ಹಿಟ್ ಅಂಡ್ ರನ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ತೀವ್ರ ವ್ಯಥೆ ಉಂಟುಮಾಡುವಂತಹ ಮತ್ತೊಂದು ದುರಂತ ಬಾಣಸವಾಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸಾಫ್ಟ್‌ವೇರ್ ಇಂಜಿನಿಯರ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶದ ಕರ್ನೂಲ್ ಮೂಲದ ಸಲಗುಣ ಪ್ರದೀಪ್ (ವಯಸ್ಸು 25) ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನ ಕಲ್ಕೆರೆ ಪ್ರದೇಶದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ನಗರದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಶನಿವಾರ ಸಂಜೆ, ಬೈಕ್‌ನಲ್ಲಿ ಕಲ್ಯಾಣನಗರಕ್ಕೆ ತೆರಳುತ್ತಿದ್ದ ವೇಳೆ, ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ರಸ್ತೆಗೆ ಬಿದ್ದ ಪ್ರದೀಪ್ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾದರೂ ಅವರು ಮಾರ್ಗಮಧ್ಯೆ ಪ್ರಾಣಬಿಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯ ನಂತರ, ಅಪರಿಚಿತ ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ಆರಂಭಿಸಿದ್ದು, ತಪ್ಪಿತಸ್ಥ ವಾಹನ ಮತ್ತು ಚಾಲಕನ ಪತ್ತೆಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

RELATED ARTICLES
- Advertisment -
Google search engine

Most Popular