ಬೆಂಗಳೂರು: ಅಳಿಯನೇ ಅತ್ತೆಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನ ಬೆಳ್ಳಂದೂರು ಬಳಿಯ ಇಬ್ಬಲೂರಿನಲ್ಲಿ ನಡೆದಿದೆ.
ಗೀತಾ ಚಾಕು ಇರಿತಕ್ಕೊಳಾಗದ ಅತ್ತೆ.
ಆರೋಪಿ ಅಳಿಯ ಮನೋಜ್ ತನ್ನ ಪತ್ನಿ ವರ್ಷಿತಾಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಮನನೊಂದು ತವರು ಮನೆಗೆ ಹೋಗಿದ್ದಳು. ಈ ಹಿನ್ನೆಲೆಯಲ್ಲಿ ಪತ್ನಿಯನ್ನು ಕರೆತರಲು ಹೋಗಿದ್ದ ಅಳಿಯ ಮನೋಜ್ ಹೋಗಿದ್ದಾನೆ. ಈ ಸಂದರ್ಭದಲ್ಲಿ ಅತ್ತೆ ಮತ್ತು ಅಳಿಯನ ನಡುವೆ ಗಲಾಟೆ ನಡೆದಿತ್ತು. ಮಾತಿಗೆ ಮಾತು ಬೆಳೆದು ಅಳಿಯ ಮನೋಜ್ ಅತ್ತೆ ಗೀತಾಗೆ ಚಾಕು ಇರಿದು ಎಸ್ಕೇಪ್ ಆಗಿದ್ದ.
ಪ್ರಕರಣ ದಾಖಲಿಸಿಕೊಂಡ ಬೆಳ್ಳಂದೂರು ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.